ಬ್ರೇಕಿಂಗ್ ನ್ಯೂಸ್
31-07-20 11:42 am Cinema Correspondant ಸಿನಿಮಾ
ಸುಕುಮಾರ್ ನಿರ್ದೇಶನದಲ್ಲಿ ಅಲ್ಲು ಅರ್ಜುನ್ ನಟಿಸುತ್ತಿರುವ 'ಪುಷ್ಪ' ಚಿತ್ರ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ಚಿತ್ರದಲ್ಲಿ ನಟಿರುವ ಕಲಾವಿದರ ಕುರಿತಾಗಿಯೇ ಎರಡು ಮೂರು ತಿಂಗಳಿನಿಂದ ಚರ್ಚೆ ನಡೆಯುತ್ತಿದೆ. ಈ ನಡುವೆ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾದ ಘೋಷಣೆ ಮಾಡಿದ್ದಾರೆ. ನಿರ್ದೇಶಕ ಕೊರಟಾಲ ಶಿವ ಜತೆ ಸಿನಿಮಾ ಮಾಡುತ್ತಿರುವುದಾಗಿ ಅಲ್ಲು ಅರ್ಜುನ್ ಪ್ರಕಟಿಸಿದ್ದಾರೆ. ಈ ಚಿತ್ರಕ್ಕೆ ಇನ್ನೂ ಅಧಿಕೃತ ಹೆಸರು ಇರಿಸಿಲ್ಲ. ತಾತ್ಕಾಲಿಕವಾಗಿ 'ಎಎ21' ಎಂದು ಶೀರ್ಷಿಕೆ ಇರಿಸಲಾಗಿದೆ. ಈ ಚಿತ್ರದ ವಿಶೇಷ ಪೋಸ್ಟರ್ ಅನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.
ಜುಲೈ 31ರಂದು ಅಲ್ಲು ಅರ್ಜುನ್ ಅಜ್ಜ ಅಲ್ಲು ರಾಮಲಿಂಗಯ್ಯ ಅವರ 16ನೇ ಪುಣ್ಯತಿಥಿ. ತಾತನನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅರ್ಜುನ್, ನಂತರ ತಮ್ಮ ಹೊಸ ಚಿತ್ರದ ಘೋಷಣೆ ಮಾಡಿದ್ದಾರೆ.
ಯುವಸುಧಾ ಆರ್ಟ್ಸ್ ಮತ್ತು ಜಿಎ2 ಪಿಕ್ಚರ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರ 2022ರ ಆರಂಭದಲ್ಲಿ ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ಅತಿ ದೊಡ್ಡ ಮನರಂಜನೆಯ ಚಿತ್ರ ಬಹುಭಾಷೆಗಳಲ್ಲಿ ತಯಾರಾಗಲಿದೆ ಎಂದು ಪ್ರಕಟಿಸಲಾಗಿದೆ.
ಹೀಗಾಗಿ ಇದು ಕನ್ನಡದಲ್ಲಿಯೂ ಡಬ್ ಆಗಿ ಬಿಡುಗಡೆಯಾಗಲಿದೆ ಎಂಬ ನಿರೀಕ್ಷೆ ಮೂಡಿಸಿದೆ. ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಚಿತ್ರದ ಪೋಸ್ಟರ್ ಅನ್ನು ಕನ್ನಡದಲ್ಲಿಯೂ ಬಿಡುಗಡೆ ಮಾಡಲಾಗಿತ್ತು. ಕನ್ನಡದಲ್ಲಿ ಕೂಡ 'ಪುಷ್ಪ' ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು. ಹಾಗೆಯೇ 'ಎಎ21' ಸಹ ಕನ್ನಡದಲ್ಲಿ ತೆರೆಕಾಣುವ ನಿರೀಕ್ಷೆಯಿದೆ.
ಎಎ21' ಚಿತ್ರದ ಪೋಸ್ಟರ್ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನದಿಯೊಂದರ ತೀರದಲ್ಲಿ ನಿಂತಿರುವ ಯುವಕರಿಬ್ಬರು ಹಳ್ಳಿಯೊಂದರ ಕಡೆಗೆ ನೋಡುತ್ತಾ ನಿಂತಿರುವುದನ್ನು ಪೋಸ್ಟರ್ನಲ್ಲಿ ಚಿತ್ರಿಸಲಾಗಿದೆ. ಪಕ್ಕದಲ್ಲಿ ದೋಣಿಯೊಂದು ಇದೆ. ಈ ಪೋಸ್ಟರ್ ಚಿತ್ರದ ಕಥೆ ಏನಿರಬಹುದು ಎಂಬ ಸುಳಿವು ನೀಡದೆ ಇದ್ದರೂ ಕುತೂಹಲ ಮೂಡಿಸುವಂತಿದೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm