ಬ್ರೇಕಿಂಗ್ ನ್ಯೂಸ್
31-07-20 11:42 am Cinema Correspondant ಸಿನಿಮಾ
ಸುಕುಮಾರ್ ನಿರ್ದೇಶನದಲ್ಲಿ ಅಲ್ಲು ಅರ್ಜುನ್ ನಟಿಸುತ್ತಿರುವ 'ಪುಷ್ಪ' ಚಿತ್ರ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ಚಿತ್ರದಲ್ಲಿ ನಟಿರುವ ಕಲಾವಿದರ ಕುರಿತಾಗಿಯೇ ಎರಡು ಮೂರು ತಿಂಗಳಿನಿಂದ ಚರ್ಚೆ ನಡೆಯುತ್ತಿದೆ. ಈ ನಡುವೆ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾದ ಘೋಷಣೆ ಮಾಡಿದ್ದಾರೆ. ನಿರ್ದೇಶಕ ಕೊರಟಾಲ ಶಿವ ಜತೆ ಸಿನಿಮಾ ಮಾಡುತ್ತಿರುವುದಾಗಿ ಅಲ್ಲು ಅರ್ಜುನ್ ಪ್ರಕಟಿಸಿದ್ದಾರೆ. ಈ ಚಿತ್ರಕ್ಕೆ ಇನ್ನೂ ಅಧಿಕೃತ ಹೆಸರು ಇರಿಸಿಲ್ಲ. ತಾತ್ಕಾಲಿಕವಾಗಿ 'ಎಎ21' ಎಂದು ಶೀರ್ಷಿಕೆ ಇರಿಸಲಾಗಿದೆ. ಈ ಚಿತ್ರದ ವಿಶೇಷ ಪೋಸ್ಟರ್ ಅನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.
ಜುಲೈ 31ರಂದು ಅಲ್ಲು ಅರ್ಜುನ್ ಅಜ್ಜ ಅಲ್ಲು ರಾಮಲಿಂಗಯ್ಯ ಅವರ 16ನೇ ಪುಣ್ಯತಿಥಿ. ತಾತನನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅರ್ಜುನ್, ನಂತರ ತಮ್ಮ ಹೊಸ ಚಿತ್ರದ ಘೋಷಣೆ ಮಾಡಿದ್ದಾರೆ.
ಯುವಸುಧಾ ಆರ್ಟ್ಸ್ ಮತ್ತು ಜಿಎ2 ಪಿಕ್ಚರ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರ 2022ರ ಆರಂಭದಲ್ಲಿ ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ಅತಿ ದೊಡ್ಡ ಮನರಂಜನೆಯ ಚಿತ್ರ ಬಹುಭಾಷೆಗಳಲ್ಲಿ ತಯಾರಾಗಲಿದೆ ಎಂದು ಪ್ರಕಟಿಸಲಾಗಿದೆ.
ಹೀಗಾಗಿ ಇದು ಕನ್ನಡದಲ್ಲಿಯೂ ಡಬ್ ಆಗಿ ಬಿಡುಗಡೆಯಾಗಲಿದೆ ಎಂಬ ನಿರೀಕ್ಷೆ ಮೂಡಿಸಿದೆ. ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಚಿತ್ರದ ಪೋಸ್ಟರ್ ಅನ್ನು ಕನ್ನಡದಲ್ಲಿಯೂ ಬಿಡುಗಡೆ ಮಾಡಲಾಗಿತ್ತು. ಕನ್ನಡದಲ್ಲಿ ಕೂಡ 'ಪುಷ್ಪ' ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು. ಹಾಗೆಯೇ 'ಎಎ21' ಸಹ ಕನ್ನಡದಲ್ಲಿ ತೆರೆಕಾಣುವ ನಿರೀಕ್ಷೆಯಿದೆ.
ಎಎ21' ಚಿತ್ರದ ಪೋಸ್ಟರ್ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನದಿಯೊಂದರ ತೀರದಲ್ಲಿ ನಿಂತಿರುವ ಯುವಕರಿಬ್ಬರು ಹಳ್ಳಿಯೊಂದರ ಕಡೆಗೆ ನೋಡುತ್ತಾ ನಿಂತಿರುವುದನ್ನು ಪೋಸ್ಟರ್ನಲ್ಲಿ ಚಿತ್ರಿಸಲಾಗಿದೆ. ಪಕ್ಕದಲ್ಲಿ ದೋಣಿಯೊಂದು ಇದೆ. ಈ ಪೋಸ್ಟರ್ ಚಿತ್ರದ ಕಥೆ ಏನಿರಬಹುದು ಎಂಬ ಸುಳಿವು ನೀಡದೆ ಇದ್ದರೂ ಕುತೂಹಲ ಮೂಡಿಸುವಂತಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm