ಬ್ರೇಕಿಂಗ್ ನ್ಯೂಸ್
14-01-21 04:15 pm Source: FILMIBEAT Manjunatha C ಸಿನಿಮಾ
ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ನಟ ಪುನೀತ್ ರಾಜ್ಕುಮಾರ್ ಮನೆಗೆ ಇಂದು ಭೇಟಿ ನೀಡಿದ್ದರು.
ಜಮೀರ್ ಅಹ್ಮದ್ ಪುತ್ರಿಯ ವಿವಾಹ ಇದೇ ತಿಂಗಳು ನಡೆಯಲಿದ್ದು, ಮದುವೆಗೆ ಆಮಂತ್ರಣ ಪತ್ರಿಕೆ ನೀಡಲು ಜಮೀರ್ ಅಹ್ಮದ್ ಅವರು ತಮ್ಮ ಪುತ್ರನನ್ನೂ ಜೊತೆ ಮಾಡಿಕೊಂಡು ಪುನೀತ್ ರಾಜ್ಕುಮಾರ್ ಸೇರಿ ಹಲವು ಸಿನಿ ತಾರೆಗಳ ನಿವಾಸಕ್ಕೆ ಭೇಟಿ ನೀಡಿದ್ದರು.
ಜಮೀರ್ ಅವರು ಪುತ್ರಿಯ ವಿವಾಹಕ್ಕೆ ಜಮೀರ್ ಅನ್ನು ಆಹ್ವಾನಿಸಿದ್ದು, ಪುನೀತ್ ಜೊತೆಯಲ್ಲಿ ಕೆಲ ಕಾಲ ಕಳೆದು ಉಭಯ ಕುಶಲೋಪರಿಯನ್ನು ಸಹ ಮಾಡಿದ್ದಾರೆ. ಪುನೀತ್ ಅವರನ್ನು ಜಮೀರ್ ಮಗಳ ಮದುವೆಗೆ ಆಹ್ವಾನಿಸುತ್ತಿರುವ ಚಿತ್ರಗಳನ್ನು ಜಮೀರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಯಶ್, ಸುದೀಪ್, ರಾಘಣ್ಣನ ಮನೆಗೆ ಭೇಟಿ
ಪುನೀತ್ ಮನೆಗೆ ಭೇಟಿ ಕೊಟ್ಟ ಬಳಿಕ ನಟರಾದ ಸುದೀಪ್, ಯಶ್ ನಿವಾಸಗಳಿಗೂ ಭೇಟಿ ಕೊಟ್ಟ ಜಮೀರ್ ಹಾಗೂ ಅವರ ಪುತ್ರ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ನಟ ರಾಘವೇಂದ್ರ ರಾಜ್ಕುಮಾರ್ ನಿವಾಸಕ್ಕೂ ಜಮೀರ್ ಭೇಟಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ, ಶಿವರಾಜ್ ಕುಮಾರ್, ದುನಿಯಾ ವಿಜಯ್ ಅವರಿಗೂ ಆಹ್ವಾನ ನೀಡಿದ್ದಾರೆ ಜಮೀರ್.

ಯಡಿಯೂರಪ್ಪ, ಸಿದ್ದರಾಮಯ್ಯ ಅವರಿಗೂ ಆಹ್ವಾನ
ಜಮೀರ್ ಅವರು ತಮ್ಮ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡುತ್ತಿದ್ದು, ಹಲವಾರು ರಾಜಕೀಯ ಮುಖಂಡರನ್ನು, ಸಿನಿಮಾ ಸೆಲೆಬ್ರಿಟಿಗಳನ್ನು ಮದುವೆಗೆ ಆಹ್ವಾನಿಸಿದ್ದಾರೆ. ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನೂ ಸಹ ಜಮೀರ್ ಅವರು ಮಗಳ ಮದುವೆಗೆ ಆಹ್ವಾನಿಸಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರನ್ನೂ ಮದುವೆಗೆ ಆಹ್ವಾನಿಸಿದ್ದಾರೆ ಜಮೀರ್.

ಬಾಲಿವುಡ್ನಿಂದ ಅತಿಥಿಗಳು ಆಗಮಿಸುವ ನಿರೀಕ್ಷೆ
ಬಾಲಿವುಡ್ನಲ್ಲಿಯೂ ಸಾಕಷ್ಟು ಪರಿಚಯ ಜಮೀರ್ ಅವರಿಗಿದ್ದು, ಬಾಲಿವುಡ್ ಸೆಲೆಬ್ರಿಟಿಗಳು ಸಹ ಜಮೀರ್ ಪುತ್ರಿಯ ಮದುವೆಗೆ ಆಗಮಿಸುವ ಸಂಭವ ಇದೆ. ಈ ಹಿಂದೆ ಜಮೀರ್ ಹುಟ್ಟುಹಬ್ಬಕ್ಕೆ ಸಂಜಯ್ ದತ್, ಸೋಹೆಲ್ ಖಾನ್, ಅರ್ಬಾಜ್ ಖಾನ್ ಅವರುಗಳು ಹಾಜರಾಗಿದ್ದರು.

ಜನವರಿ 21 ರಂದು ಮದುವೆ
ಜಮೀರ್ ಅಹ್ಮದ್ ಪುತ್ರಿಯ ವಿವಾಹವು ಜನವರಿ 21 ರಂದು ಭಾರಿ ಅದ್ಧೂರಿಯಾಗಿ ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜಕೀಯ ನಾಯಕರ, ಸಿನಿಮಾ ಸೆಲೆಬ್ರಿಟಿಗಳ ದಂಡೇ ಅಂದು ಅರಮನೆ ಮೈದಾನದಲ್ಲಿ ನೆರೆಯಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm