ಬ್ರೇಕಿಂಗ್ ನ್ಯೂಸ್
15-01-21 02:55 pm Source: FILMIBEAT Manjunatha C ಸಿನಿಮಾ
ಕನ್ನಡ ಸಿನಿಮಾ 'ರುದ್ರಿ'ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು.
ವಿಂದ್ಯಾ ಸಿನಿಮಾ ಉತ್ಸವದಲ್ಲಿ 'ರುದ್ರಿ'ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ 'ರುದ್ರಿ' ಭಾಜನವಾಗಿದೆ.

46 ದೇಶಗಳ ಸುಮಾರು 350 ಕ್ಕೂ ಹೆಚ್ಚು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಭಾಗವಹಿಸಿದ್ದವು. ಅಂತಿಮ ಸುತ್ತಿನಲ್ಲಿ ರುದ್ರಿ ಜೊತೆಯಲ್ಲಿ ಇನ್ನೂ 14 ಸಿನಿಮಾಗಳು ಇದ್ದವು. ಕೊನೆಗೆ 'ರುದ್ರಿ' ಎರಡನೇ ಅತ್ಯುತ್ತಮ ಸಿನಿಮಾ ಎಂಬ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯನ್ನು ನಿರ್ದೇಶಕ ಬಡಿಗೇರ್ ದೇವೇಂದ್ರ ಸ್ವೀಕರಿಸಿದರು. 'ರುದ್ರಿ' ಸಿನಿಮಾಕ್ಕೆ ಪ್ರಶಸ್ತಿ ಬಂದಿದ್ದಕ್ಕೆ ಚಿತ್ರತಂಡ ಅತೀವ ಸಂತಸ ವ್ಯಕ್ತಪಡಿಸಿದ್ದು, ಪ್ರಶಸ್ತಿಯು ಇಡೀಯ ಚಿತ್ರತಂಡದ ಶ್ರಮದ ಫಲ ಎಂದಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ಸೇಡು ತೀರಿಸಿಕೊಳ್ಳುವ ಕತೆಯನ್ನು ಈ ಸಿನಿಮಾ ಹೊಂದಿದೆ. ಸಿನಿಮಾಕ್ಕೆ ಸಾಧುಕೋಕಿಲ ಸಂಗೀತ ನೀಡಿದ್ದು, ಸಿ.ಆರ್.ಮಂಜುನಾಥ ಸಿನಿಮಾ ನಿರ್ಮಿಸಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am