ಬ್ರೇಕಿಂಗ್ ನ್ಯೂಸ್
16-01-21 05:21 pm Source: FILMIBEAT Bharath Kumar K ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am