ಬ್ರೇಕಿಂಗ್ ನ್ಯೂಸ್
16-01-21 05:21 pm Source: FILMIBEAT Bharath Kumar K ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm