ಬ್ರೇಕಿಂಗ್ ನ್ಯೂಸ್
16-01-21 05:21 pm Source: FILMIBEAT Bharath Kumar K ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm