ಬ್ರೇಕಿಂಗ್ ನ್ಯೂಸ್
17-01-21 02:17 pm Source: FILMIBEAT ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಗಳಿಂದ ದೂರ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದಲ್ಲೊಂದು ವಿವಾದಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಂದು ವಿವಾದದಲ್ಲಿ ಕಂಗನಾ ಸಿಲುಕಿಕೊಂಡಿದ್ದಾರೆ. ಕ್ವೀನ್ ನಟಿಯ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪ ಕೇಳಿಬಂದಿದೆ. ಕಂಗನಾ ಇತ್ತೀಚಿಗಷ್ಟೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. 'ಮಣಿಕರ್ಣಿಕಾ; ದಿ ಲೆಜೆಂಡ್ ಆಫ್ ದಿಡ್ಡಾ' ಎಂಬ ಹೆಸರಿನ ಚಿತ್ರದಲ್ಲಿ ಕಾಶ್ಮೀರದ ರಾಣಿಯಾಗಿ ನಟಿಸುವುದಾಗಿ ಕಂಗನಾ ಘೋಷಣೆ ಮಾಡಿದ್ದರು. ಸಿನಿಮಾ ಘೋಷಣೆಯಾದ ಬೆನ್ನಲ್ಲೇ ವಿವಾದವೂ ಬೆನ್ನತ್ತಿದೆ. ಕಂಗನಾ ಕಥೆ ಕದ್ದಿದ್ದಾರೆ ಎಂದು ಲೇಖಕ ಆಶಿಶ್ ಕೌಲ್ ಆರೋಪಿಸಿ ಕಂಗನಾಗೆ ನೋಟಿಸ್ ನೀಡಲಾಗಿದೆ.
ದಿಡ್ಡಾ- ಕಾಶ್ಮೀರ್ ಕೀ ಯೋಧಾ ರಾಣಿ' ಪುಸ್ತಕಕ್ಕೆ ಮುನ್ನುಡಿ ಬರೆದುಕೊಡುವಂತೆ ಕಂಗನಾಗೆ ಈ ಹಿಂದೆ ಮೇಲ್ ಮಾಡಿದ್ದೆ, ಆದರೆೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುನ್ನುಡಿ ಬದಲು, ಅದನ್ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ ಎಂದು ಲೇಖಕ ಆಶಿಶ್ ಆರೋಪಿಸಿದ್ದಾರೆ.
ನೋಟಿಸ್ ನಲ್ಲಿ ಕಂಗನಾಗೆ 72 ಗಂಟೆಯಲ್ಲಿ ಉತ್ತರ ನೀಡುವಂತೆ ಕೇಳಿಕೊಂಡಿದ್ದಾರೆ. ಇಲ್ಲವಾದರೇ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಚಿತ್ರದ ನಿರ್ಮಾಪಕ ಕಮಲ್ ಜೈನ್ ಕಥೆ ಕದ್ದು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ಅವರ ಸಿನಿಮಾ ಪುಸ್ತಕವನ್ನು ಆಧರಿಸಿದೆ ಎಂದು ಲೇಖಕ ಆಶೀಶ್ ಆರೋಪಿಸಿದ್ದಾರೆ. ಅಲ್ಲದೇ ಕಂಗನಾ ವಿರುದ್ಧ ಕಥೆ ಕದ್ದ ಆರೋಪ ಮಾಡಿದ ಬಳಿಕ ಕಂಗನಾ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ, ನಿಂದನೆ ಮಾಡುತ್ತಿದ್ದಾರೆ. ಇದರಿಂದ ತೀವ್ರ ಮಾನಸಿಕ ಯಾತನೆ ಅನುಭವಿಸಿರುವುದಾಗಿಯೂ ಅಶಿಶ್ ಹೇಳಿದ್ದಾರೆ.
ಅಲ್ಲದೆ ಈ ಪುಸ್ತಕ ಈಗಾಗಲೇ ಸಿನಿಮಾವಾಗಲು ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆ ನಡೆದಿದೆ. 2017ರಲ್ಲೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ. ಇದೀಗ ಕಂಗನಾ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎನ್ನುವ ಕಾತರ ಅಭಿಮಾನಿಗಲ್ಲಿದೆ. ಸಿನಿಮಾ ಪ್ರಾರಂಭಕ್ಕೂ ಮುನ್ನವೇ ಎದುರಾಗಿರುವ ವಿಘ್ನ ನಿವಾರಣೆಯಾಗುತ್ತಾ ಕಾದುನೋಡಬೇಕು.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 10:37 am
HK News Desk
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm