ಬ್ರೇಕಿಂಗ್ ನ್ಯೂಸ್
17-01-21 02:17 pm Source: FILMIBEAT ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಗಳಿಂದ ದೂರ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದಲ್ಲೊಂದು ವಿವಾದಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಂದು ವಿವಾದದಲ್ಲಿ ಕಂಗನಾ ಸಿಲುಕಿಕೊಂಡಿದ್ದಾರೆ. ಕ್ವೀನ್ ನಟಿಯ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪ ಕೇಳಿಬಂದಿದೆ. ಕಂಗನಾ ಇತ್ತೀಚಿಗಷ್ಟೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. 'ಮಣಿಕರ್ಣಿಕಾ; ದಿ ಲೆಜೆಂಡ್ ಆಫ್ ದಿಡ್ಡಾ' ಎಂಬ ಹೆಸರಿನ ಚಿತ್ರದಲ್ಲಿ ಕಾಶ್ಮೀರದ ರಾಣಿಯಾಗಿ ನಟಿಸುವುದಾಗಿ ಕಂಗನಾ ಘೋಷಣೆ ಮಾಡಿದ್ದರು. ಸಿನಿಮಾ ಘೋಷಣೆಯಾದ ಬೆನ್ನಲ್ಲೇ ವಿವಾದವೂ ಬೆನ್ನತ್ತಿದೆ. ಕಂಗನಾ ಕಥೆ ಕದ್ದಿದ್ದಾರೆ ಎಂದು ಲೇಖಕ ಆಶಿಶ್ ಕೌಲ್ ಆರೋಪಿಸಿ ಕಂಗನಾಗೆ ನೋಟಿಸ್ ನೀಡಲಾಗಿದೆ.
ದಿಡ್ಡಾ- ಕಾಶ್ಮೀರ್ ಕೀ ಯೋಧಾ ರಾಣಿ' ಪುಸ್ತಕಕ್ಕೆ ಮುನ್ನುಡಿ ಬರೆದುಕೊಡುವಂತೆ ಕಂಗನಾಗೆ ಈ ಹಿಂದೆ ಮೇಲ್ ಮಾಡಿದ್ದೆ, ಆದರೆೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುನ್ನುಡಿ ಬದಲು, ಅದನ್ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ ಎಂದು ಲೇಖಕ ಆಶಿಶ್ ಆರೋಪಿಸಿದ್ದಾರೆ.
ನೋಟಿಸ್ ನಲ್ಲಿ ಕಂಗನಾಗೆ 72 ಗಂಟೆಯಲ್ಲಿ ಉತ್ತರ ನೀಡುವಂತೆ ಕೇಳಿಕೊಂಡಿದ್ದಾರೆ. ಇಲ್ಲವಾದರೇ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಚಿತ್ರದ ನಿರ್ಮಾಪಕ ಕಮಲ್ ಜೈನ್ ಕಥೆ ಕದ್ದು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ಅವರ ಸಿನಿಮಾ ಪುಸ್ತಕವನ್ನು ಆಧರಿಸಿದೆ ಎಂದು ಲೇಖಕ ಆಶೀಶ್ ಆರೋಪಿಸಿದ್ದಾರೆ. ಅಲ್ಲದೇ ಕಂಗನಾ ವಿರುದ್ಧ ಕಥೆ ಕದ್ದ ಆರೋಪ ಮಾಡಿದ ಬಳಿಕ ಕಂಗನಾ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ, ನಿಂದನೆ ಮಾಡುತ್ತಿದ್ದಾರೆ. ಇದರಿಂದ ತೀವ್ರ ಮಾನಸಿಕ ಯಾತನೆ ಅನುಭವಿಸಿರುವುದಾಗಿಯೂ ಅಶಿಶ್ ಹೇಳಿದ್ದಾರೆ.
ಅಲ್ಲದೆ ಈ ಪುಸ್ತಕ ಈಗಾಗಲೇ ಸಿನಿಮಾವಾಗಲು ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆ ನಡೆದಿದೆ. 2017ರಲ್ಲೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ. ಇದೀಗ ಕಂಗನಾ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎನ್ನುವ ಕಾತರ ಅಭಿಮಾನಿಗಲ್ಲಿದೆ. ಸಿನಿಮಾ ಪ್ರಾರಂಭಕ್ಕೂ ಮುನ್ನವೇ ಎದುರಾಗಿರುವ ವಿಘ್ನ ನಿವಾರಣೆಯಾಗುತ್ತಾ ಕಾದುನೋಡಬೇಕು.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm