ಬ್ರೇಕಿಂಗ್ ನ್ಯೂಸ್
17-01-21 02:24 pm Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಮಾನವೀಯ ಕೆಲಸಗಳು ಮುಂದುವರೆದಿದೆ. ಒಂದಲ್ಲೊಂದು ವಿಚಾರದ ಮೂಲಕ ಸದಾ ಸುದ್ದಿಯಲ್ಲಿರುವ ನಟ ಸೋನು ಸೂದ್ ಇದೀಗ ಬಟ್ಟೆ ಹೊಲಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ರಸ್ತೆಬದಿಯಲ್ಲಿ ಕುಳಿತು ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಾನವೀಯ ಕೆಲಸಗಳ ಮೂಲಕ ಅಭಿಮಾನಿಗಳ ಪಾಲಿನ ನಿಜವಾದ ದೇವರಾಗಿರುವ ಸೋನು ಸೂದ್ ಅವರನ್ನು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಸರಳತೆಯ ಮೂಲಕವೇ ಎಲ್ಲರ ಮನಗೆದ್ದಿರುವ ಸೋನು ಇದೀಗ ಟೈಲರಿಂಗ್ ಶಾಪ್ ಶುರು ಮಾಡಿಕೊಂಡಿದ್ದಾರೆ.
ಸೋನು ಸೂದ್ ಟೈಲರಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆ ಬದಿಯಲ್ಲಿ, ಬರಿ ಗಾಲಿನಲ್ಲಿ ಹೊಲಿಗೆ ಯಂತ್ರದ ಮೇಲೆ ಕುಳಿತು ಸುಲಲಿತವಾಗಿ ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಗೆ ಅಭಿಮಾನಿಗಳು ಮನಸೋತಿದ್ದಾರೆ.
ಈ ವಿಡಿಯೋವನ್ನು ನಟ ಸೋನು ಸೂದ್ ಅವರೇ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ಇದು ಸೋನು ಸೂದ್ ಟೈಲರಿಂಗ್ ಶಾಪ್. ಇಲ್ಲಿ ಉಚಿತವಾಗಿ ಬಟ್ಟೆ ಹೊಲಿದುಕೊಡಲಾಗುತ್ತದೆ' ಎಂದು ಬರೆದುಕೊಂಡಿದ್ದಾರೆ. ಸೋನು ಸೂದ್ ಈ ವಿಡಿಯೋಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಸೋನು ಸೂದ್ ಸದ್ಯ ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸೋನು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚಿಗೆ ಚಿತ್ರೀಕರಣ ಸೆಟ್ ನಲ್ಲಿ ಸೋನು ಸೂದ್ ಸಿಬ್ಬಂದಿಗೆ ಉಚಿತ ಮೊಬೈಲ್ ಗಳನ್ನು ನೀಡಿ ಗಮನ ಸೆಳೆದಿದ್ದರು.
This News Article is a Copy of FILMIBEAT
Sonu Sood tailor shop.
— sonu sood (@SonuSood) January 16, 2021
यहां मुफ्त में सिलाई की जाती है।
पैंट की जगह निकर बन जाए, इसकी हमारी गारंटी नहीं 😂 pic.twitter.com/VCBocpUSum
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm