ಬ್ರೇಕಿಂಗ್ ನ್ಯೂಸ್
17-01-21 02:24 pm Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಮಾನವೀಯ ಕೆಲಸಗಳು ಮುಂದುವರೆದಿದೆ. ಒಂದಲ್ಲೊಂದು ವಿಚಾರದ ಮೂಲಕ ಸದಾ ಸುದ್ದಿಯಲ್ಲಿರುವ ನಟ ಸೋನು ಸೂದ್ ಇದೀಗ ಬಟ್ಟೆ ಹೊಲಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ರಸ್ತೆಬದಿಯಲ್ಲಿ ಕುಳಿತು ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಾನವೀಯ ಕೆಲಸಗಳ ಮೂಲಕ ಅಭಿಮಾನಿಗಳ ಪಾಲಿನ ನಿಜವಾದ ದೇವರಾಗಿರುವ ಸೋನು ಸೂದ್ ಅವರನ್ನು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಸರಳತೆಯ ಮೂಲಕವೇ ಎಲ್ಲರ ಮನಗೆದ್ದಿರುವ ಸೋನು ಇದೀಗ ಟೈಲರಿಂಗ್ ಶಾಪ್ ಶುರು ಮಾಡಿಕೊಂಡಿದ್ದಾರೆ.
ಸೋನು ಸೂದ್ ಟೈಲರಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆ ಬದಿಯಲ್ಲಿ, ಬರಿ ಗಾಲಿನಲ್ಲಿ ಹೊಲಿಗೆ ಯಂತ್ರದ ಮೇಲೆ ಕುಳಿತು ಸುಲಲಿತವಾಗಿ ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಗೆ ಅಭಿಮಾನಿಗಳು ಮನಸೋತಿದ್ದಾರೆ.
ಈ ವಿಡಿಯೋವನ್ನು ನಟ ಸೋನು ಸೂದ್ ಅವರೇ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ಇದು ಸೋನು ಸೂದ್ ಟೈಲರಿಂಗ್ ಶಾಪ್. ಇಲ್ಲಿ ಉಚಿತವಾಗಿ ಬಟ್ಟೆ ಹೊಲಿದುಕೊಡಲಾಗುತ್ತದೆ' ಎಂದು ಬರೆದುಕೊಂಡಿದ್ದಾರೆ. ಸೋನು ಸೂದ್ ಈ ವಿಡಿಯೋಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಸೋನು ಸೂದ್ ಸದ್ಯ ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸೋನು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚಿಗೆ ಚಿತ್ರೀಕರಣ ಸೆಟ್ ನಲ್ಲಿ ಸೋನು ಸೂದ್ ಸಿಬ್ಬಂದಿಗೆ ಉಚಿತ ಮೊಬೈಲ್ ಗಳನ್ನು ನೀಡಿ ಗಮನ ಸೆಳೆದಿದ್ದರು.
This News Article is a Copy of FILMIBEAT
Sonu Sood tailor shop.
— sonu sood (@SonuSood) January 16, 2021
यहां मुफ्त में सिलाई की जाती है।
पैंट की जगह निकर बन जाए, इसकी हमारी गारंटी नहीं 😂 pic.twitter.com/VCBocpUSum
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am