ಬ್ರೇಕಿಂಗ್ ನ್ಯೂಸ್
18-01-21 01:23 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್, ಡಿಂಪಲ್ ಕಪಾಡಿಯ, ಸುನಿಲ್ ಗ್ರೋವರ್, ಗೌಹರ್ ಖಾನ್ ಸೇರಿದಂತೆ ಅನೇಕ ಖ್ಯಾತ ಕಲಾವಿದರು ನಟಿಸಿರುವ ಬಹುನಿರೀಕ್ಷೆಯ ವೆಬ್ ಸೀರಿಸ್ 'ತಾಂಡವ್' ವಿವಾದಕ್ಕೆ ಸಿಲುಕಿದೆ. ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿರುವ ತಾಂಡವ್ ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದಿದ್ದಾರೆ. ರಾಜಕೀಯ ಕಥಾಹಿನ್ನಲೆ ಇರುವ ಈ ಸರಣಿಯಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿ, ತಾಂಡವ್ ವೆಬ್ ಸರಣಿಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಟ ಸೈಫ್ ಅಲಿ ಖಾನ್ ಅವರನ್ನು ಕಟುವಾಗಿ ಟೀಕಿಸಿದ ಬಿಜೆಪಿ ನಾಯಕ ರಾಮ್ ಕದಮ್, ಹಿಂದೂ ಧಾರ್ಮಿಕ ಭಾವನೆಗಳನ್ನು ನೋಯಿಸುವ ಸರಣಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದಿದ್ದಾರೆ.
ತಾಂಡವ್ ನಲ್ಲಿ ಶಿವನ ಕುರಿತು ಒಂದು ದೃಶ್ಯವಿದೆ. ಆ ದೃಶ್ಯದಲ್ಲಿ ನಟ ಮೊಹಮ್ಮದ್ ಜೆಶಾನ್ ಆಯೂಬ್, ಕೈಯಲ್ಲಿ ಶಿವನ ತ್ರಿಶೂಲ ಮತ್ತು ಡಮರುಗವನ್ನು ಹಿಡಿದು ಕೊಂಡಿದ್ದಾರೆ. ಆದರೆ ಅದನ್ನು ಆಕ್ಷೇಪಾರ್ಹವಾಗಿ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ದೂರು ನೀಡಿರುವ ಬಿಜೆಪಿ ನಾಯಕ ರಾಮ್ ಕದಮ್ 'ಬಾಲಿವುಡ್ ನ ಕೆಲವು ಸಿನಿಮಾಗಳು ಮತ್ತು ವೆಬ್ ಸೀರಿಸ್ ಗಳಲ್ಲಿ ಹಿಂದೂ ದೇವರನ್ನು ಅಗೌರವ ಗೊಳಿಸಲಾಗುತ್ತಿದೆ ಯಾಕೆ? ತಾಂಡವ್ ನಲ್ಲಿ ಒಬ್ಬ ನಟ ಶಿವನನ್ನು ಗೇಲಿ ಮಾಡಿದ್ದಾರೆ. ಹಿಂದೂ ದಾರ್ಮಿಕ ಭಾವನೆಗೆ ಅಗೌರವ ತಂದಿದ್ದಾರೆ. ಈ ಭಾಗವನ್ನು ತೆಗೆದು ಹಾಕಬೇಕು ಅಲ್ಲದೆ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು.
ಬದಲಾವಣೆ ಮಾಡುವವರೆಗೂ ಬಿಜೆಪಿ ತಾಂಡವ್ ಅನ್ನು ಬಹಿಷ್ಕರಿಸುತ್ತದೆ' ಎಂದು ಹೇಳಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸರನ್ನು ಭೇಟಿಯಾಗಿರುವ ರಾಮ್ ಕದಮ್ ಮುಂಬೈನ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ವೆಬ್ ಸರಣಿಯ ನಿರ್ಮಾಪಕರ ವಿರುದ್ಧ ಬಿಜೆಪಿ ಶಾಸಕ ರಾಮ್ ಕದಮ್ ದೂರು ದಾಖಲಿಸಿದ್ದಾರೆ. ತಾಂಡವ್ ವೆಬ್ ಸರಣಿಗೆ ಅಲಿ ಅಬ್ಬಾಸ್ ಜಾಫರ್ ನಿರ್ದೇಶನ ಮಾಡಿದ್ದಾರೆ. ಈ ಸರಣಿ ಅಮೆಜಾನ್ ಪ್ರೈಮ್ ನಲ್ಲಿ ಜನವರಿ 15ರಂದು ರಿಲೀಸ್ ಆಗಿದ್ದು, ಒಟ್ಟು 9 ಎಪಿಸೋಡ್ ಗಳಿವೆ. ನಟ ಸೈಫ್ ಅಲಿ ಖಾನ್ ಸಮರ ಪ್ರತಾಪ್ ಸಿಂಗ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
This News Article is a Copy of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm