ಬ್ರೇಕಿಂಗ್ ನ್ಯೂಸ್
18-01-21 01:23 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್, ಡಿಂಪಲ್ ಕಪಾಡಿಯ, ಸುನಿಲ್ ಗ್ರೋವರ್, ಗೌಹರ್ ಖಾನ್ ಸೇರಿದಂತೆ ಅನೇಕ ಖ್ಯಾತ ಕಲಾವಿದರು ನಟಿಸಿರುವ ಬಹುನಿರೀಕ್ಷೆಯ ವೆಬ್ ಸೀರಿಸ್ 'ತಾಂಡವ್' ವಿವಾದಕ್ಕೆ ಸಿಲುಕಿದೆ. ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿರುವ ತಾಂಡವ್ ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದಿದ್ದಾರೆ. ರಾಜಕೀಯ ಕಥಾಹಿನ್ನಲೆ ಇರುವ ಈ ಸರಣಿಯಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿ, ತಾಂಡವ್ ವೆಬ್ ಸರಣಿಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಟ ಸೈಫ್ ಅಲಿ ಖಾನ್ ಅವರನ್ನು ಕಟುವಾಗಿ ಟೀಕಿಸಿದ ಬಿಜೆಪಿ ನಾಯಕ ರಾಮ್ ಕದಮ್, ಹಿಂದೂ ಧಾರ್ಮಿಕ ಭಾವನೆಗಳನ್ನು ನೋಯಿಸುವ ಸರಣಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದಿದ್ದಾರೆ.
ತಾಂಡವ್ ನಲ್ಲಿ ಶಿವನ ಕುರಿತು ಒಂದು ದೃಶ್ಯವಿದೆ. ಆ ದೃಶ್ಯದಲ್ಲಿ ನಟ ಮೊಹಮ್ಮದ್ ಜೆಶಾನ್ ಆಯೂಬ್, ಕೈಯಲ್ಲಿ ಶಿವನ ತ್ರಿಶೂಲ ಮತ್ತು ಡಮರುಗವನ್ನು ಹಿಡಿದು ಕೊಂಡಿದ್ದಾರೆ. ಆದರೆ ಅದನ್ನು ಆಕ್ಷೇಪಾರ್ಹವಾಗಿ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ದೂರು ನೀಡಿರುವ ಬಿಜೆಪಿ ನಾಯಕ ರಾಮ್ ಕದಮ್ 'ಬಾಲಿವುಡ್ ನ ಕೆಲವು ಸಿನಿಮಾಗಳು ಮತ್ತು ವೆಬ್ ಸೀರಿಸ್ ಗಳಲ್ಲಿ ಹಿಂದೂ ದೇವರನ್ನು ಅಗೌರವ ಗೊಳಿಸಲಾಗುತ್ತಿದೆ ಯಾಕೆ? ತಾಂಡವ್ ನಲ್ಲಿ ಒಬ್ಬ ನಟ ಶಿವನನ್ನು ಗೇಲಿ ಮಾಡಿದ್ದಾರೆ. ಹಿಂದೂ ದಾರ್ಮಿಕ ಭಾವನೆಗೆ ಅಗೌರವ ತಂದಿದ್ದಾರೆ. ಈ ಭಾಗವನ್ನು ತೆಗೆದು ಹಾಕಬೇಕು ಅಲ್ಲದೆ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು.
ಬದಲಾವಣೆ ಮಾಡುವವರೆಗೂ ಬಿಜೆಪಿ ತಾಂಡವ್ ಅನ್ನು ಬಹಿಷ್ಕರಿಸುತ್ತದೆ' ಎಂದು ಹೇಳಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸರನ್ನು ಭೇಟಿಯಾಗಿರುವ ರಾಮ್ ಕದಮ್ ಮುಂಬೈನ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ವೆಬ್ ಸರಣಿಯ ನಿರ್ಮಾಪಕರ ವಿರುದ್ಧ ಬಿಜೆಪಿ ಶಾಸಕ ರಾಮ್ ಕದಮ್ ದೂರು ದಾಖಲಿಸಿದ್ದಾರೆ. ತಾಂಡವ್ ವೆಬ್ ಸರಣಿಗೆ ಅಲಿ ಅಬ್ಬಾಸ್ ಜಾಫರ್ ನಿರ್ದೇಶನ ಮಾಡಿದ್ದಾರೆ. ಈ ಸರಣಿ ಅಮೆಜಾನ್ ಪ್ರೈಮ್ ನಲ್ಲಿ ಜನವರಿ 15ರಂದು ರಿಲೀಸ್ ಆಗಿದ್ದು, ಒಟ್ಟು 9 ಎಪಿಸೋಡ್ ಗಳಿವೆ. ನಟ ಸೈಫ್ ಅಲಿ ಖಾನ್ ಸಮರ ಪ್ರತಾಪ್ ಸಿಂಗ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
This News Article is a Copy of FILMIBEAT
23-10-25 12:46 pm
Bangalore Correspondent
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm