ಬ್ರೇಕಿಂಗ್ ನ್ಯೂಸ್
18-01-21 01:23 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್, ಡಿಂಪಲ್ ಕಪಾಡಿಯ, ಸುನಿಲ್ ಗ್ರೋವರ್, ಗೌಹರ್ ಖಾನ್ ಸೇರಿದಂತೆ ಅನೇಕ ಖ್ಯಾತ ಕಲಾವಿದರು ನಟಿಸಿರುವ ಬಹುನಿರೀಕ್ಷೆಯ ವೆಬ್ ಸೀರಿಸ್ 'ತಾಂಡವ್' ವಿವಾದಕ್ಕೆ ಸಿಲುಕಿದೆ. ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿರುವ ತಾಂಡವ್ ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದಿದ್ದಾರೆ. ರಾಜಕೀಯ ಕಥಾಹಿನ್ನಲೆ ಇರುವ ಈ ಸರಣಿಯಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿ, ತಾಂಡವ್ ವೆಬ್ ಸರಣಿಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಟ ಸೈಫ್ ಅಲಿ ಖಾನ್ ಅವರನ್ನು ಕಟುವಾಗಿ ಟೀಕಿಸಿದ ಬಿಜೆಪಿ ನಾಯಕ ರಾಮ್ ಕದಮ್, ಹಿಂದೂ ಧಾರ್ಮಿಕ ಭಾವನೆಗಳನ್ನು ನೋಯಿಸುವ ಸರಣಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದಿದ್ದಾರೆ.
ತಾಂಡವ್ ನಲ್ಲಿ ಶಿವನ ಕುರಿತು ಒಂದು ದೃಶ್ಯವಿದೆ. ಆ ದೃಶ್ಯದಲ್ಲಿ ನಟ ಮೊಹಮ್ಮದ್ ಜೆಶಾನ್ ಆಯೂಬ್, ಕೈಯಲ್ಲಿ ಶಿವನ ತ್ರಿಶೂಲ ಮತ್ತು ಡಮರುಗವನ್ನು ಹಿಡಿದು ಕೊಂಡಿದ್ದಾರೆ. ಆದರೆ ಅದನ್ನು ಆಕ್ಷೇಪಾರ್ಹವಾಗಿ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ದೂರು ನೀಡಿರುವ ಬಿಜೆಪಿ ನಾಯಕ ರಾಮ್ ಕದಮ್ 'ಬಾಲಿವುಡ್ ನ ಕೆಲವು ಸಿನಿಮಾಗಳು ಮತ್ತು ವೆಬ್ ಸೀರಿಸ್ ಗಳಲ್ಲಿ ಹಿಂದೂ ದೇವರನ್ನು ಅಗೌರವ ಗೊಳಿಸಲಾಗುತ್ತಿದೆ ಯಾಕೆ? ತಾಂಡವ್ ನಲ್ಲಿ ಒಬ್ಬ ನಟ ಶಿವನನ್ನು ಗೇಲಿ ಮಾಡಿದ್ದಾರೆ. ಹಿಂದೂ ದಾರ್ಮಿಕ ಭಾವನೆಗೆ ಅಗೌರವ ತಂದಿದ್ದಾರೆ. ಈ ಭಾಗವನ್ನು ತೆಗೆದು ಹಾಕಬೇಕು ಅಲ್ಲದೆ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು.
ಬದಲಾವಣೆ ಮಾಡುವವರೆಗೂ ಬಿಜೆಪಿ ತಾಂಡವ್ ಅನ್ನು ಬಹಿಷ್ಕರಿಸುತ್ತದೆ' ಎಂದು ಹೇಳಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸರನ್ನು ಭೇಟಿಯಾಗಿರುವ ರಾಮ್ ಕದಮ್ ಮುಂಬೈನ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ವೆಬ್ ಸರಣಿಯ ನಿರ್ಮಾಪಕರ ವಿರುದ್ಧ ಬಿಜೆಪಿ ಶಾಸಕ ರಾಮ್ ಕದಮ್ ದೂರು ದಾಖಲಿಸಿದ್ದಾರೆ. ತಾಂಡವ್ ವೆಬ್ ಸರಣಿಗೆ ಅಲಿ ಅಬ್ಬಾಸ್ ಜಾಫರ್ ನಿರ್ದೇಶನ ಮಾಡಿದ್ದಾರೆ. ಈ ಸರಣಿ ಅಮೆಜಾನ್ ಪ್ರೈಮ್ ನಲ್ಲಿ ಜನವರಿ 15ರಂದು ರಿಲೀಸ್ ಆಗಿದ್ದು, ಒಟ್ಟು 9 ಎಪಿಸೋಡ್ ಗಳಿವೆ. ನಟ ಸೈಫ್ ಅಲಿ ಖಾನ್ ಸಮರ ಪ್ರತಾಪ್ ಸಿಂಗ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm