ಬ್ರೇಕಿಂಗ್ ನ್ಯೂಸ್
20-01-21 11:47 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿಯ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇಬ್ಬರು ಮಕ್ಕಳನ್ನು ಬೆಳ್ಳಿತೆರೆ ಮೇಲೆ ನೋಡಬೇಕು ಎಂದು ನಟಿ ಶ್ರೀದೇವಿ ಕನಸು ಕಂಡಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮೊದಲ ಮಗಳು ಜಾಹ್ನವಿ ಕಪೂರ್ ಚೊಚ್ಚಲ ಸಿನಿಮಾ ನೋಡುವ ಅವಕಾಶ ಸಹ ಶ್ರೀದೇವಿಗೆ ಸಿಕ್ಕಿಲ್ಲ. ಅಂದಹಾಗೆ ಜಾಹ್ನವಿ ಸದ್ಯ ಬಾಲಿವುಡ್ ನಲ್ಲಿ ಸಕ್ರೀಯರಾಗಿದ್ದಾರೆ. ಧಡಕ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಾಹ್ನವಿ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಕ್ಕನ ಬಳಿಕ ಇದೀಗ ತಂಗಿ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಖುಷಿ ಕಪೂರ್ ಬಾಲಿವುಡ್ ಎಂಟ್ರಿ ಬಗ್ಗೆ ತಂದೆ ಬೋನಿ ಕಪೂರ್ ಮಾಹಿತಿ ನೀಡಿದ್ದಾರೆ. ಆಂಗ್ಲ ವೆಬ್ ಪೋರ್ಟಲ್ ಜೊತೆ ಮಾತನಾಡಿದ ಬೋನಿ ಕಪೂರ್, 'ನನ್ನ ಬಳಿ ನಿರ್ಮಾಣ ಮಾಡುವ ಸಾಮರ್ಥ್ಯವಿದೆ. ಆದರೆ ಅವಳು ಬೇರೆ ನಿರ್ಮಾಣ ಸಂಸ್ಥೆಯಿಂದ ಎಂಟ್ರಿ ಕೊಡಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ ನಾನು ಅವಳ ತಂದೆ, ಕಂಫರ್ಟ್ ನಿಂದ ಹೊರಬಂದು ಅವಳು ಸಿನಿಮಾ ಮಾಡಬೇಕು' ಎಂದು ಹೇಳಿದ್ದಾರೆ.
'ಬಾಲಿವುಡ್ ನಲ್ಲಿ ಅವಳು ಅವಳದೇ ಆದ ಹೆಜ್ಜೆ ಕಂಡುಕೊಳ್ಳಬೇಕು ಎನ್ನುವುದು ನನ್ನ ಬಯಕೆ. ಸುರಕ್ಷಿತ ಎಂದು ಭಾವಿಸುವ ಯಾರಾದರು ಅವಳನ್ನು ಲಾಂಚ್ ಮಾಡಬಹುದು' ಎಂದು ಹೇಳಿದ್ದಾರೆ. ಅಂದಹಾಗೆ ಖುಷಿ ಈಗಾಗಲೇ ಬಾಲಿವುಡ್ ಎಂಟ್ರಿಗೆ ತಯಾರಿ ಮಾಡಿಕೊಂಡಿದ್ದಾರೆ. ಯುಎಸ್ ನಲ್ಲಿ ನಟನೆಯ ತರಬೇತಿ ಕಲಿತು ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ವೀವ್ ಆಗಿರುವ ಖುಷಿ ಆಗಾಗ ಸುಂದರ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಖುಷಿ ಯಾವ ಸಿನಿಮಾದ ಮೂಲಕ ಬಣ್ಣ ಹಚ್ಚಲಿದ್ದಾರೆ, ನಿರ್ದೇಶಕ, ನಿರ್ಮಾಪಕ, ಸಹ ನಟ ಯಾರಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂದಹಾಗೆ ಶ್ರೀದೇವಿ ಮೊದಲ ಪುತ್ರಿ ಜಾಹ್ನವಿ ಕಪೂರ್ ಕೊನೆಯಾದಾಗಿ ಗುಂಜನ್ ಸಕ್ಸೇನಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಸದ್ಯ ದೋಸ್ತಾನ-2, ರೂಹಿ ಅಫ್ಜಾನಾ, ಗುಡ್ ಲಕ್ ಜೆರ್ರಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am