ಬ್ರೇಕಿಂಗ್ ನ್ಯೂಸ್
20-01-21 11:47 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿಯ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇಬ್ಬರು ಮಕ್ಕಳನ್ನು ಬೆಳ್ಳಿತೆರೆ ಮೇಲೆ ನೋಡಬೇಕು ಎಂದು ನಟಿ ಶ್ರೀದೇವಿ ಕನಸು ಕಂಡಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮೊದಲ ಮಗಳು ಜಾಹ್ನವಿ ಕಪೂರ್ ಚೊಚ್ಚಲ ಸಿನಿಮಾ ನೋಡುವ ಅವಕಾಶ ಸಹ ಶ್ರೀದೇವಿಗೆ ಸಿಕ್ಕಿಲ್ಲ. ಅಂದಹಾಗೆ ಜಾಹ್ನವಿ ಸದ್ಯ ಬಾಲಿವುಡ್ ನಲ್ಲಿ ಸಕ್ರೀಯರಾಗಿದ್ದಾರೆ. ಧಡಕ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಾಹ್ನವಿ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಕ್ಕನ ಬಳಿಕ ಇದೀಗ ತಂಗಿ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಖುಷಿ ಕಪೂರ್ ಬಾಲಿವುಡ್ ಎಂಟ್ರಿ ಬಗ್ಗೆ ತಂದೆ ಬೋನಿ ಕಪೂರ್ ಮಾಹಿತಿ ನೀಡಿದ್ದಾರೆ. ಆಂಗ್ಲ ವೆಬ್ ಪೋರ್ಟಲ್ ಜೊತೆ ಮಾತನಾಡಿದ ಬೋನಿ ಕಪೂರ್, 'ನನ್ನ ಬಳಿ ನಿರ್ಮಾಣ ಮಾಡುವ ಸಾಮರ್ಥ್ಯವಿದೆ. ಆದರೆ ಅವಳು ಬೇರೆ ನಿರ್ಮಾಣ ಸಂಸ್ಥೆಯಿಂದ ಎಂಟ್ರಿ ಕೊಡಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ ನಾನು ಅವಳ ತಂದೆ, ಕಂಫರ್ಟ್ ನಿಂದ ಹೊರಬಂದು ಅವಳು ಸಿನಿಮಾ ಮಾಡಬೇಕು' ಎಂದು ಹೇಳಿದ್ದಾರೆ.
'ಬಾಲಿವುಡ್ ನಲ್ಲಿ ಅವಳು ಅವಳದೇ ಆದ ಹೆಜ್ಜೆ ಕಂಡುಕೊಳ್ಳಬೇಕು ಎನ್ನುವುದು ನನ್ನ ಬಯಕೆ. ಸುರಕ್ಷಿತ ಎಂದು ಭಾವಿಸುವ ಯಾರಾದರು ಅವಳನ್ನು ಲಾಂಚ್ ಮಾಡಬಹುದು' ಎಂದು ಹೇಳಿದ್ದಾರೆ. ಅಂದಹಾಗೆ ಖುಷಿ ಈಗಾಗಲೇ ಬಾಲಿವುಡ್ ಎಂಟ್ರಿಗೆ ತಯಾರಿ ಮಾಡಿಕೊಂಡಿದ್ದಾರೆ. ಯುಎಸ್ ನಲ್ಲಿ ನಟನೆಯ ತರಬೇತಿ ಕಲಿತು ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ವೀವ್ ಆಗಿರುವ ಖುಷಿ ಆಗಾಗ ಸುಂದರ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಖುಷಿ ಯಾವ ಸಿನಿಮಾದ ಮೂಲಕ ಬಣ್ಣ ಹಚ್ಚಲಿದ್ದಾರೆ, ನಿರ್ದೇಶಕ, ನಿರ್ಮಾಪಕ, ಸಹ ನಟ ಯಾರಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂದಹಾಗೆ ಶ್ರೀದೇವಿ ಮೊದಲ ಪುತ್ರಿ ಜಾಹ್ನವಿ ಕಪೂರ್ ಕೊನೆಯಾದಾಗಿ ಗುಂಜನ್ ಸಕ್ಸೇನಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಸದ್ಯ ದೋಸ್ತಾನ-2, ರೂಹಿ ಅಫ್ಜಾನಾ, ಗುಡ್ ಲಕ್ ಜೆರ್ರಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm