ಬ್ರೇಕಿಂಗ್ ನ್ಯೂಸ್
20-01-21 11:47 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿಯ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇಬ್ಬರು ಮಕ್ಕಳನ್ನು ಬೆಳ್ಳಿತೆರೆ ಮೇಲೆ ನೋಡಬೇಕು ಎಂದು ನಟಿ ಶ್ರೀದೇವಿ ಕನಸು ಕಂಡಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮೊದಲ ಮಗಳು ಜಾಹ್ನವಿ ಕಪೂರ್ ಚೊಚ್ಚಲ ಸಿನಿಮಾ ನೋಡುವ ಅವಕಾಶ ಸಹ ಶ್ರೀದೇವಿಗೆ ಸಿಕ್ಕಿಲ್ಲ. ಅಂದಹಾಗೆ ಜಾಹ್ನವಿ ಸದ್ಯ ಬಾಲಿವುಡ್ ನಲ್ಲಿ ಸಕ್ರೀಯರಾಗಿದ್ದಾರೆ. ಧಡಕ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಾಹ್ನವಿ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಕ್ಕನ ಬಳಿಕ ಇದೀಗ ತಂಗಿ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಖುಷಿ ಕಪೂರ್ ಬಾಲಿವುಡ್ ಎಂಟ್ರಿ ಬಗ್ಗೆ ತಂದೆ ಬೋನಿ ಕಪೂರ್ ಮಾಹಿತಿ ನೀಡಿದ್ದಾರೆ. ಆಂಗ್ಲ ವೆಬ್ ಪೋರ್ಟಲ್ ಜೊತೆ ಮಾತನಾಡಿದ ಬೋನಿ ಕಪೂರ್, 'ನನ್ನ ಬಳಿ ನಿರ್ಮಾಣ ಮಾಡುವ ಸಾಮರ್ಥ್ಯವಿದೆ. ಆದರೆ ಅವಳು ಬೇರೆ ನಿರ್ಮಾಣ ಸಂಸ್ಥೆಯಿಂದ ಎಂಟ್ರಿ ಕೊಡಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ ನಾನು ಅವಳ ತಂದೆ, ಕಂಫರ್ಟ್ ನಿಂದ ಹೊರಬಂದು ಅವಳು ಸಿನಿಮಾ ಮಾಡಬೇಕು' ಎಂದು ಹೇಳಿದ್ದಾರೆ.
'ಬಾಲಿವುಡ್ ನಲ್ಲಿ ಅವಳು ಅವಳದೇ ಆದ ಹೆಜ್ಜೆ ಕಂಡುಕೊಳ್ಳಬೇಕು ಎನ್ನುವುದು ನನ್ನ ಬಯಕೆ. ಸುರಕ್ಷಿತ ಎಂದು ಭಾವಿಸುವ ಯಾರಾದರು ಅವಳನ್ನು ಲಾಂಚ್ ಮಾಡಬಹುದು' ಎಂದು ಹೇಳಿದ್ದಾರೆ. ಅಂದಹಾಗೆ ಖುಷಿ ಈಗಾಗಲೇ ಬಾಲಿವುಡ್ ಎಂಟ್ರಿಗೆ ತಯಾರಿ ಮಾಡಿಕೊಂಡಿದ್ದಾರೆ. ಯುಎಸ್ ನಲ್ಲಿ ನಟನೆಯ ತರಬೇತಿ ಕಲಿತು ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ವೀವ್ ಆಗಿರುವ ಖುಷಿ ಆಗಾಗ ಸುಂದರ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಖುಷಿ ಯಾವ ಸಿನಿಮಾದ ಮೂಲಕ ಬಣ್ಣ ಹಚ್ಚಲಿದ್ದಾರೆ, ನಿರ್ದೇಶಕ, ನಿರ್ಮಾಪಕ, ಸಹ ನಟ ಯಾರಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂದಹಾಗೆ ಶ್ರೀದೇವಿ ಮೊದಲ ಪುತ್ರಿ ಜಾಹ್ನವಿ ಕಪೂರ್ ಕೊನೆಯಾದಾಗಿ ಗುಂಜನ್ ಸಕ್ಸೇನಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಸದ್ಯ ದೋಸ್ತಾನ-2, ರೂಹಿ ಅಫ್ಜಾನಾ, ಗುಡ್ ಲಕ್ ಜೆರ್ರಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
This News Article is a Copy of FILMIBEAT
23-10-25 12:46 pm
Bangalore Correspondent
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm