ಬ್ರೇಕಿಂಗ್ ನ್ಯೂಸ್
20-01-21 12:32 pm Source: FILMIBEAT Manjunatha C ಸಿನಿಮಾ
ನಟ ಸುದೀಪ್ ಮಾಡಿರುವ, ಮಾಡುತ್ತಿರುವ ಸಮಾಜ ಸೇವೆಗೆ ಪೀಠಿಕೆ ಅಗತ್ಯವಿಲ್ಲ. ಅವರ ಸಮಾಜ ಸೇವೆಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ. ಇದೀಗ ಕಿಚ್ಚ ಸುದೀಪ್ ಬೆಂಬಲದೊಂದಿಗೆ ಅವರ ಅಭಿಮಾನಿಗಳು ನಿರ್ವಹಿಸುತ್ತಿರುವ 'ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ' ಅಂಧ ವ್ಯಕ್ತಿಯೊಬ್ಬನ ಬಾಳಿಗೆ ಬೆಳಕಾಗುವ ಪ್ರಯತ್ನ ಮಾಡಿದ್ದಾರೆ. ಗುಲ್ಬರ್ಗ ಜಿಲ್ಲೆಯ ಔರಾದ್ ಗ್ರಾಮದ ಅಂಧ ಯುವಕ ಸಾಯಿನಾಥ್ ಗೆ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ ನೆರವು ದೊರೆತಿದೆ. ನೆರವಿನ ರೂಪದಲ್ಲಿ ಹಣವನ್ನು ನಿರಾಕರಿಸಿದ ಯುವಕ, ತನಗೆ ಒಂದು ಮೈಕ್ ಹಾಗೂ ಒಂದು ಸ್ಪೀಕರ್ ಬೇಕೆಂದು ಕೇಳಿದ್ದಾನೆ.
ಆತನ ಆಸೆಯಂತೆಯೇ ಒಂದು ಮೈಕ್ ಹಾಗೂ ಸ್ಪೀಕರ್ ಅನ್ನು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಸದಸ್ಯರು ಒದಗಿಸಿದ್ದಾರೆ. ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಹಾಡುಗಳನ್ನು ಹಾಡಿ ತಾನು ಜೀವನಕ್ಕೆ ಹಣ ಗಳಿಸುವುದಾಗಿ ಸಾಯಿನಾಥ್ ಹೇಳಿದ್ದಾನೆ. ಉತ್ತಮವಾಗಿ ಹಾಡು ಹೇಳುವ ಸಾಯಿನಾಥ್, ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಜೀವನಕ್ಕೆ ಹಣ ಗಳಿಸುವ ಉಮೇದು ಹೊಂದಿದ್ದಾನೆ. ಆತನ ಜೀವನ ಸುಗಮವಾಗಿ ನಡೆಯಲು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ನೆರವಾಗಿದೆ. ಈ ಹಿಂದೆ ಸಹ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿಯು ಈ ರೀತಿಯ ಹಲವು ಕಾರ್ಯಗಳನ್ನು ಮಾಡಿದೆ.
ಕೆಲವು ದಿನಗಳ ಹಿಂದೆಯಷ್ಟೆ ಸುದೀಪ್ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಬಂದಾಗ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ವ್ಯಕ್ತಿಗೆ ನೆರವಾಗಿದ್ದರು.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm