ಬ್ರೇಕಿಂಗ್ ನ್ಯೂಸ್
20-01-21 12:32 pm Source: FILMIBEAT Manjunatha C ಸಿನಿಮಾ
ನಟ ಸುದೀಪ್ ಮಾಡಿರುವ, ಮಾಡುತ್ತಿರುವ ಸಮಾಜ ಸೇವೆಗೆ ಪೀಠಿಕೆ ಅಗತ್ಯವಿಲ್ಲ. ಅವರ ಸಮಾಜ ಸೇವೆಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ. ಇದೀಗ ಕಿಚ್ಚ ಸುದೀಪ್ ಬೆಂಬಲದೊಂದಿಗೆ ಅವರ ಅಭಿಮಾನಿಗಳು ನಿರ್ವಹಿಸುತ್ತಿರುವ 'ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ' ಅಂಧ ವ್ಯಕ್ತಿಯೊಬ್ಬನ ಬಾಳಿಗೆ ಬೆಳಕಾಗುವ ಪ್ರಯತ್ನ ಮಾಡಿದ್ದಾರೆ. ಗುಲ್ಬರ್ಗ ಜಿಲ್ಲೆಯ ಔರಾದ್ ಗ್ರಾಮದ ಅಂಧ ಯುವಕ ಸಾಯಿನಾಥ್ ಗೆ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ ನೆರವು ದೊರೆತಿದೆ. ನೆರವಿನ ರೂಪದಲ್ಲಿ ಹಣವನ್ನು ನಿರಾಕರಿಸಿದ ಯುವಕ, ತನಗೆ ಒಂದು ಮೈಕ್ ಹಾಗೂ ಒಂದು ಸ್ಪೀಕರ್ ಬೇಕೆಂದು ಕೇಳಿದ್ದಾನೆ.
ಆತನ ಆಸೆಯಂತೆಯೇ ಒಂದು ಮೈಕ್ ಹಾಗೂ ಸ್ಪೀಕರ್ ಅನ್ನು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಸದಸ್ಯರು ಒದಗಿಸಿದ್ದಾರೆ. ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಹಾಡುಗಳನ್ನು ಹಾಡಿ ತಾನು ಜೀವನಕ್ಕೆ ಹಣ ಗಳಿಸುವುದಾಗಿ ಸಾಯಿನಾಥ್ ಹೇಳಿದ್ದಾನೆ. ಉತ್ತಮವಾಗಿ ಹಾಡು ಹೇಳುವ ಸಾಯಿನಾಥ್, ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಜೀವನಕ್ಕೆ ಹಣ ಗಳಿಸುವ ಉಮೇದು ಹೊಂದಿದ್ದಾನೆ. ಆತನ ಜೀವನ ಸುಗಮವಾಗಿ ನಡೆಯಲು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ನೆರವಾಗಿದೆ. ಈ ಹಿಂದೆ ಸಹ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿಯು ಈ ರೀತಿಯ ಹಲವು ಕಾರ್ಯಗಳನ್ನು ಮಾಡಿದೆ.
ಕೆಲವು ದಿನಗಳ ಹಿಂದೆಯಷ್ಟೆ ಸುದೀಪ್ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಬಂದಾಗ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ವ್ಯಕ್ತಿಗೆ ನೆರವಾಗಿದ್ದರು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm