ಬ್ರೇಕಿಂಗ್ ನ್ಯೂಸ್
20-01-21 12:32 pm Source: FILMIBEAT Manjunatha C ಸಿನಿಮಾ
ನಟ ಸುದೀಪ್ ಮಾಡಿರುವ, ಮಾಡುತ್ತಿರುವ ಸಮಾಜ ಸೇವೆಗೆ ಪೀಠಿಕೆ ಅಗತ್ಯವಿಲ್ಲ. ಅವರ ಸಮಾಜ ಸೇವೆಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ. ಇದೀಗ ಕಿಚ್ಚ ಸುದೀಪ್ ಬೆಂಬಲದೊಂದಿಗೆ ಅವರ ಅಭಿಮಾನಿಗಳು ನಿರ್ವಹಿಸುತ್ತಿರುವ 'ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ' ಅಂಧ ವ್ಯಕ್ತಿಯೊಬ್ಬನ ಬಾಳಿಗೆ ಬೆಳಕಾಗುವ ಪ್ರಯತ್ನ ಮಾಡಿದ್ದಾರೆ. ಗುಲ್ಬರ್ಗ ಜಿಲ್ಲೆಯ ಔರಾದ್ ಗ್ರಾಮದ ಅಂಧ ಯುವಕ ಸಾಯಿನಾಥ್ ಗೆ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ ನೆರವು ದೊರೆತಿದೆ. ನೆರವಿನ ರೂಪದಲ್ಲಿ ಹಣವನ್ನು ನಿರಾಕರಿಸಿದ ಯುವಕ, ತನಗೆ ಒಂದು ಮೈಕ್ ಹಾಗೂ ಒಂದು ಸ್ಪೀಕರ್ ಬೇಕೆಂದು ಕೇಳಿದ್ದಾನೆ.
ಆತನ ಆಸೆಯಂತೆಯೇ ಒಂದು ಮೈಕ್ ಹಾಗೂ ಸ್ಪೀಕರ್ ಅನ್ನು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಸದಸ್ಯರು ಒದಗಿಸಿದ್ದಾರೆ. ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಹಾಡುಗಳನ್ನು ಹಾಡಿ ತಾನು ಜೀವನಕ್ಕೆ ಹಣ ಗಳಿಸುವುದಾಗಿ ಸಾಯಿನಾಥ್ ಹೇಳಿದ್ದಾನೆ. ಉತ್ತಮವಾಗಿ ಹಾಡು ಹೇಳುವ ಸಾಯಿನಾಥ್, ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಜೀವನಕ್ಕೆ ಹಣ ಗಳಿಸುವ ಉಮೇದು ಹೊಂದಿದ್ದಾನೆ. ಆತನ ಜೀವನ ಸುಗಮವಾಗಿ ನಡೆಯಲು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ನೆರವಾಗಿದೆ. ಈ ಹಿಂದೆ ಸಹ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿಯು ಈ ರೀತಿಯ ಹಲವು ಕಾರ್ಯಗಳನ್ನು ಮಾಡಿದೆ.
ಕೆಲವು ದಿನಗಳ ಹಿಂದೆಯಷ್ಟೆ ಸುದೀಪ್ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಬಂದಾಗ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ವ್ಯಕ್ತಿಗೆ ನೆರವಾಗಿದ್ದರು.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am