ಶಿವಮೊಗ್ಗ ಗಣಿಗಾರಿಕೆ ಸ್ಥಳದಲ್ಲಿ ಸ್ಫೋಟ: ಕಿಚ್ಚ ಸುದೀಪ್ ಪ್ರತಿಕ್ರಿಯೆ

22-01-21 03:31 pm       Source: FILMIBEAT Shruthi Gk   ಸಿನಿಮಾ

ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರಿ ಸ್ಫೋಟಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರಿ ಸ್ಫೋಟಕ್ಕೆ ಇಡೀ ಜಿಲ್ಲೆ ಬೆಚ್ಚಿಬಿದ್ದಿದೆ. ದುರಂತದಲ್ಲಿ 8ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಲಾರಿಯೊಂದರಲ್ಲಿ ತುಂಬಿದ್ದ ಜಿಲಿಟಿನ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ದು, ಲಾರಿಯಲ್ಲಿದ್ದ ಎಲ್ಲಾ ಕಾರ್ಮಿಕರು ಸಾಪನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆ ಹೇಗಿತ್ತು ಎಂದರೆ ಲಾರಿಯಲ್ಲಿದ್ದ ಕಾರ್ಮಿಕರ ಮೃತದೇಹ ಗುರುತೇ ಸಿಗದಹಾಗೆ ಛಿದ್ರ ಛಿದ್ರವಾಗಿದೆ.

ಈ ದುರಂತ ಘಟನೆ ಬಗ್ಗೆ ರಾಜಕೀಯ ಗಣ್ಯರು ಪ್ರತಿಕ್ರಿಯೆ ನೀಡಿ, ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಇದೀಗ ಈ ಅವಘಡದ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಮೃತ ಬಡ ಕಾರ್ಮಿಕರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಜೊತೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.

'ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ' ಎಂದು ಹೇಳಿದ್ದಾರೆ. ಜೊತೆಗೆ ಮೊದಲು ಮಾನವನಾಗು ಎಂದು ಹ್ಯಾಷ್ ಟ್ಯಾಗ್ ಹಾಕಿ ಬರೆದುಕೊಂಡಿದ್ದಾರೆ.

This News Article is a Copy of FILMIBEAT