ಬ್ರೇಕಿಂಗ್ ನ್ಯೂಸ್
23-01-21 12:36 pm Source: FILMIBEAT Manjunatha C ಸಿನಿಮಾ
ಶಿವಮೊಗ್ಗದಲ್ಲಿ ನಡೆದ ಘಟನೆ ನಂತರ ಹಲವರು ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡುತ್ತಿದ್ದಾರೆ. ನಿನ್ನೆ ರಾತ್ರಿ ಶಿವಮೊಗ್ಗದ ಕಲ್ಲುಗಣಿಯೊಂದರಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದಾಗಿ ಐವರು ಮೃತಪಟ್ಟಿದ್ದಾರೆ. ಕಲ್ಲು ಗಣಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಗ್ಗೆ ಹಲವರು ಸಂತಾಪ ಸೂಚಿಸಿದ್ದು, ಗಲ್ಲು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಹ ಒತ್ತಾಯಿಸಿದ್ದಾರೆ. ನಟಿ, ಮಂಡ್ಯ ಸುಮಲತಾ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, 'ಶಿವಮೊಗ್ಗದಲ್ಲಿ ನಡೆದ ಘಟನೆ ತಿಳಿದು ತೀವ್ರ ನೋವಾಯಿತು. ನಮ್ಮೆಲರಿಗೂ ಇದೊಂದು ಎಚ್ಚರಿಕೆಯ ಗಂಟೆ. ಅಕ್ರಮ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸುವ ಸಮಯ ಬಂದಿದೆ' ಎಂದಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಸ್ಪೋಟದಿಂದ ಸಂಭವಿಸಿರುವ ಸಾವುಗಳು ತೀವ್ರ ದುಃಖ ಹಾಗೂ ಸಂಕಟ ತಂದಿವೆ. ಮೃತರಾದ ಅಮಾಯಕರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಈ ದುರಾದೃಷ್ಟ ಘಟನೆಯ ಹಿಂದೆ ಇರುವುದು ಗಣಿಗಾರಿಕೆಯಲ್ಲಿ ತೊಡಗಿರುವವರ ಬೇಜವಾಬ್ದಾರಿ ವರ್ತನೆ. ಕಾನೂನಿನ ಮೂಲಕ ಏನೇ ಕ್ರಮ ಕೈಗೊಂಡರು ಆ ಅಮಾಯಕ ಜೀವಗಳು ಮರಳಿ ಬರುವುದಿಲ್ಲ' ಎಂದಿದ್ದಾರೆ ಸುಮಲತಾ ಅಂಬರೀಶ್. ಮಂಡ್ಯ ಜಿಲ್ಲೆಯಲ್ಲಿ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ದನಿ ಎತ್ತುತ್ತಿರುವುದು ಸಹ ಇದೇ ಕಾಳಜಿಯಿಂದ. ಈ ಘಟನೆ ಮಂಡ್ಯದಲ್ಲಿ ಕಾನೂನು ಬಾಹಿರ ಗಣಿಗಾರಿಕೆಯಲ್ಲಿ ತೊಡಗಿರುವ ಎಲ್ಲರಿಗೂ ಎಚ್ಚರಿಕೆ ಗಂಟೆಯಾಗಲಿ ಎಂದಿದ್ದಾರೆ. ಅಕ್ರಮ ಗಣಿಗಾರಿಕೆ ಹಿಂದೆ ಬಹಳಸಲ ಸ್ಥಳೀಯ ರಾಜಕಾರಣಿಗಳು, ಅಧಿಕಾರಿಗಳ ಬೆಂಬಲ ಇದ್ದೇ ಇರುತ್ತದೆ. ಸರಕಾರ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿ, ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಬೇಕು ಎಂದಿದ್ದಾರೆ.
ನಟ ಸುದೀಪ್ ಸಹ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಶಿವಮೊಗ್ಗದ ಹುಣಸೋಡಿನಲ್ಲಿ , ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ, ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ' ಎಂದು ಟ್ವೀಟ್ ಮಾಡಿದ್ದಾರೆ ಸುದೀಪ್.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm