ಬ್ರೇಕಿಂಗ್ ನ್ಯೂಸ್
23-01-21 12:36 pm Source: FILMIBEAT Manjunatha C ಸಿನಿಮಾ
ಶಿವಮೊಗ್ಗದಲ್ಲಿ ನಡೆದ ಘಟನೆ ನಂತರ ಹಲವರು ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡುತ್ತಿದ್ದಾರೆ. ನಿನ್ನೆ ರಾತ್ರಿ ಶಿವಮೊಗ್ಗದ ಕಲ್ಲುಗಣಿಯೊಂದರಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದಾಗಿ ಐವರು ಮೃತಪಟ್ಟಿದ್ದಾರೆ. ಕಲ್ಲು ಗಣಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಗ್ಗೆ ಹಲವರು ಸಂತಾಪ ಸೂಚಿಸಿದ್ದು, ಗಲ್ಲು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಹ ಒತ್ತಾಯಿಸಿದ್ದಾರೆ. ನಟಿ, ಮಂಡ್ಯ ಸುಮಲತಾ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, 'ಶಿವಮೊಗ್ಗದಲ್ಲಿ ನಡೆದ ಘಟನೆ ತಿಳಿದು ತೀವ್ರ ನೋವಾಯಿತು. ನಮ್ಮೆಲರಿಗೂ ಇದೊಂದು ಎಚ್ಚರಿಕೆಯ ಗಂಟೆ. ಅಕ್ರಮ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸುವ ಸಮಯ ಬಂದಿದೆ' ಎಂದಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಸ್ಪೋಟದಿಂದ ಸಂಭವಿಸಿರುವ ಸಾವುಗಳು ತೀವ್ರ ದುಃಖ ಹಾಗೂ ಸಂಕಟ ತಂದಿವೆ. ಮೃತರಾದ ಅಮಾಯಕರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಈ ದುರಾದೃಷ್ಟ ಘಟನೆಯ ಹಿಂದೆ ಇರುವುದು ಗಣಿಗಾರಿಕೆಯಲ್ಲಿ ತೊಡಗಿರುವವರ ಬೇಜವಾಬ್ದಾರಿ ವರ್ತನೆ. ಕಾನೂನಿನ ಮೂಲಕ ಏನೇ ಕ್ರಮ ಕೈಗೊಂಡರು ಆ ಅಮಾಯಕ ಜೀವಗಳು ಮರಳಿ ಬರುವುದಿಲ್ಲ' ಎಂದಿದ್ದಾರೆ ಸುಮಲತಾ ಅಂಬರೀಶ್. ಮಂಡ್ಯ ಜಿಲ್ಲೆಯಲ್ಲಿ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ದನಿ ಎತ್ತುತ್ತಿರುವುದು ಸಹ ಇದೇ ಕಾಳಜಿಯಿಂದ. ಈ ಘಟನೆ ಮಂಡ್ಯದಲ್ಲಿ ಕಾನೂನು ಬಾಹಿರ ಗಣಿಗಾರಿಕೆಯಲ್ಲಿ ತೊಡಗಿರುವ ಎಲ್ಲರಿಗೂ ಎಚ್ಚರಿಕೆ ಗಂಟೆಯಾಗಲಿ ಎಂದಿದ್ದಾರೆ. ಅಕ್ರಮ ಗಣಿಗಾರಿಕೆ ಹಿಂದೆ ಬಹಳಸಲ ಸ್ಥಳೀಯ ರಾಜಕಾರಣಿಗಳು, ಅಧಿಕಾರಿಗಳ ಬೆಂಬಲ ಇದ್ದೇ ಇರುತ್ತದೆ. ಸರಕಾರ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿ, ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಬೇಕು ಎಂದಿದ್ದಾರೆ.
ನಟ ಸುದೀಪ್ ಸಹ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಶಿವಮೊಗ್ಗದ ಹುಣಸೋಡಿನಲ್ಲಿ , ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ, ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ' ಎಂದು ಟ್ವೀಟ್ ಮಾಡಿದ್ದಾರೆ ಸುದೀಪ್.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm