ಬ್ರೇಕಿಂಗ್ ನ್ಯೂಸ್
25-01-21 03:46 pm Source: FILMIBEAT Manjunatha C ಸಿನಿಮಾ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಚಾಲನೆ ದೊರೆತಿದ್ದು. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ದೇಶದಾದ್ಯಂತ ನಡೆಯುತ್ತಿದೆ.
ಸಮರ್ಪಣಾ ಅಭಿಯಾನದ ಹೆಸರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ನಡೆಯುತ್ತಿದ್ದು, ಹಲವಾರು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಸೇರಿದಂತೆ ಹಲವಾರು ಮಂದಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ಕನ್ನಡದ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೇ ದೇಣಿಗೆ ನೀಡಿದ್ದಾರೆ. ಅಮೂಲ್ಯ ಪತಿ ಜಗದೀಶ್ ಅವರು ಬರೋಬ್ಬರಿ 1.50 ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ. ದೇಣಿಗೆ ನೀಡಿದ ರಸೀದಿಯ ಚಿತ್ರವನ್ನು ಅಮೂಲ್ಯ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.
ಅಮೂಲ್ಯ ಮಾವ ರಾಜಕಾರಣಿ ಜಿ.ಎಚ್.ರಾಮಚಂದ್ರ ಅವರೂ ಸಹ ದೇಣಿಗೆ ನೀಡಿದ್ದು. ರಾಮಚಂದ್ರ ಅವರು ಬರೋಬ್ಬರಿ 1 ಲಕ್ಷ ಮೊತ್ತವನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದಾರೆ. ಈ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ದಂಪತಿ, 'ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಿಮಿತ್ತ ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಜೀ ರವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ ವ್ಯಯಿಸುತ್ತಿದ್ದ ಮೊತ್ತಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಪ್ರಭು ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು' ಎಂದಿದ್ದಾರೆ. ಕನ್ನಡದ ನಟಿ ಪ್ರಣಿತಾ ಸುಭಾಷ್ ಸಹ ರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ನಟ ಪವನ್ ಕಲ್ಯಾಣ್ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ಸಹಸ ದೊಡ್ಡ ಮೊತ್ತದ ದೇಣಿಗೆಯನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm