ಬ್ರೇಕಿಂಗ್ ನ್ಯೂಸ್
26-01-21 04:32 pm Source: FILMIBEAT Bharath Kumar K ಸಿನಿಮಾ
ಭಾರತೀಯ ಸಂಗೀತ ಕ್ಷೇತ್ರಕ್ಕೆ ಕೆಎಸ್ ಚಿತ್ರಾ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿದ ಕೇಂದ್ರ ಸರ್ಕಾರ ಪದ್ಮ ಭೂಷಣ ಪ್ರಶಸ್ತಿ ಘೋಷಿಸಿ ಗೌರವಿಸಿದೆ. ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಿದರೆ, ಕೆಎಸ್ ಚಿತ್ರಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ವಿಶೇಷ ಅಂದ್ರೆ ಎಸ್ಪಿ ಬಾಲಸುಬ್ರಹ್ಮಣ್ಯಂ ಮತ್ತು ಕೆಎಸ್ ಚಿತ್ರಾ ಅವರು ಅನೇಕ ಹಾಡುಗಳಿಗೆ ಒಟ್ಟಿಗೆ ದನಿಗೂಡಿಸಿದ್ದಾರೆ. ಈ ಇಬ್ಬರಿಗೂ 72ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಭಾರತದ ಅತ್ಯುನ್ನತ ಗೌರವ ನೀಡಲಾಗಿದೆ.
ಕೆಎಸ್ ಚಿತ್ರ ಅವರು ಮೂಲತಃ ಸಂಗೀತ ಕುಟುಂಬದಿಂದ ಬಂದವರು. ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದುಕೊಂಡಿದ್ದಾರೆ. 1979ರಲ್ಲಿ ಹಿನ್ನೆಲೆ ಗಾಯಕಿಯಾಗಿ ವೃತ್ತಿ ಆರಂಭಿಸಿದ ಚಿತ್ರ ಸುಮಾರು ನಾಲ್ಕು ದಶಕಗಳವರೆಗೂ ಸಂಗೀತ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.
ಕೆಎಸ್ ಚಿತ್ರ ಅವರು ಇದುವರೆಗೂ ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ, ಬೆಂಗಾಳಿ, ತುಳು ಸೇರಿದಂತೆ ಇತರೆ ಪ್ರಮುಖ ಭಾಷೆಗಳಲ್ಲಿ ಸೇರಿ ಸುಮಾರು 25000 ಹಾಡುಗಳನ್ನು ಹಾಡಿದ್ದಾರೆ. ಮಲಯ್, ಲ್ಯಾಟಿನ್, ಅರೇಬಿಕ್, ಸಿಂಹಳೀಯ, ಇಂಗ್ಲಿಷ್ ಮತ್ತು ಫ್ರೆಂಚ್ ಮುಂತಾದ ವಿದೇಶಿ ಭಾಷೆಗಳಲ್ಲೂ ಚಿತ್ರ ಹಾಡಿದ್ದಾರೆ. ತಮ್ಮ ಅದ್ಭುತ ಗಾಯನಕ್ಕಾಗಿ ಇದುವರೆಗೂ ಏಂಟು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದು ಯಾವ ಮಹಿಳಾ ಗಾಯಕಿಯೂ ಮಾಡಿರದ ಸಾಧನೆ.
ಕೆಎಸ್ ಚಿತ್ರ ಅವರನ್ನು ಉತ್ತರ ಭಾರತದ ಪಿಯಾ ಬಸಂತಿ ಎಂದು, ಆಂಧ್ರಪ್ರದೇಶದ ಮತ್ತು ತೆಲಂಗಾಣದಲ್ಲಿ ಸಂಗೀತ ಸರಸ್ವತಿ ಎಂದು ಹಾಗೂ ತಮಿಳಿನಲ್ಲಿ ಚಿನ್ನಾ ಕುಯಿಲ್ ಎಂದು ಕರೆಯುತ್ತಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm