ಬ್ರೇಕಿಂಗ್ ನ್ಯೂಸ್
26-01-21 04:32 pm Source: FILMIBEAT Bharath Kumar K ಸಿನಿಮಾ
ಭಾರತೀಯ ಸಂಗೀತ ಕ್ಷೇತ್ರಕ್ಕೆ ಕೆಎಸ್ ಚಿತ್ರಾ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿದ ಕೇಂದ್ರ ಸರ್ಕಾರ ಪದ್ಮ ಭೂಷಣ ಪ್ರಶಸ್ತಿ ಘೋಷಿಸಿ ಗೌರವಿಸಿದೆ. ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಿದರೆ, ಕೆಎಸ್ ಚಿತ್ರಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ವಿಶೇಷ ಅಂದ್ರೆ ಎಸ್ಪಿ ಬಾಲಸುಬ್ರಹ್ಮಣ್ಯಂ ಮತ್ತು ಕೆಎಸ್ ಚಿತ್ರಾ ಅವರು ಅನೇಕ ಹಾಡುಗಳಿಗೆ ಒಟ್ಟಿಗೆ ದನಿಗೂಡಿಸಿದ್ದಾರೆ. ಈ ಇಬ್ಬರಿಗೂ 72ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಭಾರತದ ಅತ್ಯುನ್ನತ ಗೌರವ ನೀಡಲಾಗಿದೆ.
ಕೆಎಸ್ ಚಿತ್ರ ಅವರು ಮೂಲತಃ ಸಂಗೀತ ಕುಟುಂಬದಿಂದ ಬಂದವರು. ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದುಕೊಂಡಿದ್ದಾರೆ. 1979ರಲ್ಲಿ ಹಿನ್ನೆಲೆ ಗಾಯಕಿಯಾಗಿ ವೃತ್ತಿ ಆರಂಭಿಸಿದ ಚಿತ್ರ ಸುಮಾರು ನಾಲ್ಕು ದಶಕಗಳವರೆಗೂ ಸಂಗೀತ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.
ಕೆಎಸ್ ಚಿತ್ರ ಅವರು ಇದುವರೆಗೂ ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ, ಬೆಂಗಾಳಿ, ತುಳು ಸೇರಿದಂತೆ ಇತರೆ ಪ್ರಮುಖ ಭಾಷೆಗಳಲ್ಲಿ ಸೇರಿ ಸುಮಾರು 25000 ಹಾಡುಗಳನ್ನು ಹಾಡಿದ್ದಾರೆ. ಮಲಯ್, ಲ್ಯಾಟಿನ್, ಅರೇಬಿಕ್, ಸಿಂಹಳೀಯ, ಇಂಗ್ಲಿಷ್ ಮತ್ತು ಫ್ರೆಂಚ್ ಮುಂತಾದ ವಿದೇಶಿ ಭಾಷೆಗಳಲ್ಲೂ ಚಿತ್ರ ಹಾಡಿದ್ದಾರೆ. ತಮ್ಮ ಅದ್ಭುತ ಗಾಯನಕ್ಕಾಗಿ ಇದುವರೆಗೂ ಏಂಟು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದು ಯಾವ ಮಹಿಳಾ ಗಾಯಕಿಯೂ ಮಾಡಿರದ ಸಾಧನೆ.
ಕೆಎಸ್ ಚಿತ್ರ ಅವರನ್ನು ಉತ್ತರ ಭಾರತದ ಪಿಯಾ ಬಸಂತಿ ಎಂದು, ಆಂಧ್ರಪ್ರದೇಶದ ಮತ್ತು ತೆಲಂಗಾಣದಲ್ಲಿ ಸಂಗೀತ ಸರಸ್ವತಿ ಎಂದು ಹಾಗೂ ತಮಿಳಿನಲ್ಲಿ ಚಿನ್ನಾ ಕುಯಿಲ್ ಎಂದು ಕರೆಯುತ್ತಾರೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm