ಬ್ರೇಕಿಂಗ್ ನ್ಯೂಸ್
27-01-21 02:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ ಇದೀಗ ಕೊನೆಯ ಹಂತದ ಚಿತ್ರೀಕರವನ್ನು ಯಶಸ್ಸಿಯಾಗಿ ಮಾಡಿ ಮುಗಿಸಿದ್ದಾರೆ.
777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕಾಶ್ಮೀರ ಕಡೆ ಪಯಣ ಬೆಳೆಸಿದ್ದ ಸಿನಿಮಾತಂಡ ಇದೀಗ ಚಿತ್ರೀಕರಣ ಮುಕ್ತಾಯವಾಗಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
777 ಚಾರ್ಲಿ ಚಿತ್ರದ ಕಾಶ್ಮೀರ ಭಾಗದ ಅಂತಿಮ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ' ಎಂದು ಚಾರ್ಲಿತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ. ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರದ ಪ್ಯಾಚ್ ವರ್ಕ್ ಕೆಲಸವಿದ್ದು, ಬೆಂಗಳೂರಿನಲ್ಲಿ ಪ್ಯಾಚ್ ವರ್ಕ್ ಕೆಲಸ ಮುಗಿಸಿದರೆ ಚಾರ್ಲಿ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇನ್ನು ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದ ತುಂಬಾ ಶೀತ ವಾತಾವರಣದ ನಡುವೆಯೂ ಚಿತ್ರೀಕರಣ ಮಾಡಿದ್ದೇವೆ. ಇದು ಎಲ್ಲಕ್ಕಿಂತ ಕಷ್ಟಕರವಾದ ಹಂತವಾಗಿತ್ತು. ಆದರೆ ನಾವು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದೇವೆ. ಇನ್ನು 6 ದಿನಗಳ ಪ್ಯಾಚ್ ವರ್ಕ್ ಬೆಂಗಳೂರಿನಲ್ಲಿದೆ.' ಎಂದು ಬರೆದುಕೊಂಡಿದ್ದಾರೆ. ಈಗಾಗಲೇ 777 ಚಾರ್ಲಿ ಸಿನಿಮಾದ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಜೂನ್ ಅಥವಾ ಜುಲೈನಲ್ಲಿ ತೆರೆಗ ಬರುವ ಸಾಧ್ಯತೆ ಇದೆ. ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm