ಬ್ರೇಕಿಂಗ್ ನ್ಯೂಸ್
27-01-21 02:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ ಇದೀಗ ಕೊನೆಯ ಹಂತದ ಚಿತ್ರೀಕರವನ್ನು ಯಶಸ್ಸಿಯಾಗಿ ಮಾಡಿ ಮುಗಿಸಿದ್ದಾರೆ.
777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕಾಶ್ಮೀರ ಕಡೆ ಪಯಣ ಬೆಳೆಸಿದ್ದ ಸಿನಿಮಾತಂಡ ಇದೀಗ ಚಿತ್ರೀಕರಣ ಮುಕ್ತಾಯವಾಗಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
777 ಚಾರ್ಲಿ ಚಿತ್ರದ ಕಾಶ್ಮೀರ ಭಾಗದ ಅಂತಿಮ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ' ಎಂದು ಚಾರ್ಲಿತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ. ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರದ ಪ್ಯಾಚ್ ವರ್ಕ್ ಕೆಲಸವಿದ್ದು, ಬೆಂಗಳೂರಿನಲ್ಲಿ ಪ್ಯಾಚ್ ವರ್ಕ್ ಕೆಲಸ ಮುಗಿಸಿದರೆ ಚಾರ್ಲಿ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇನ್ನು ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದ ತುಂಬಾ ಶೀತ ವಾತಾವರಣದ ನಡುವೆಯೂ ಚಿತ್ರೀಕರಣ ಮಾಡಿದ್ದೇವೆ. ಇದು ಎಲ್ಲಕ್ಕಿಂತ ಕಷ್ಟಕರವಾದ ಹಂತವಾಗಿತ್ತು. ಆದರೆ ನಾವು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದೇವೆ. ಇನ್ನು 6 ದಿನಗಳ ಪ್ಯಾಚ್ ವರ್ಕ್ ಬೆಂಗಳೂರಿನಲ್ಲಿದೆ.' ಎಂದು ಬರೆದುಕೊಂಡಿದ್ದಾರೆ. ಈಗಾಗಲೇ 777 ಚಾರ್ಲಿ ಸಿನಿಮಾದ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಜೂನ್ ಅಥವಾ ಜುಲೈನಲ್ಲಿ ತೆರೆಗ ಬರುವ ಸಾಧ್ಯತೆ ಇದೆ. ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 01:58 pm
Udupi Correspondent
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm