ಬ್ರೇಕಿಂಗ್ ನ್ಯೂಸ್
27-01-21 02:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ ಇದೀಗ ಕೊನೆಯ ಹಂತದ ಚಿತ್ರೀಕರವನ್ನು ಯಶಸ್ಸಿಯಾಗಿ ಮಾಡಿ ಮುಗಿಸಿದ್ದಾರೆ.
777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕಾಶ್ಮೀರ ಕಡೆ ಪಯಣ ಬೆಳೆಸಿದ್ದ ಸಿನಿಮಾತಂಡ ಇದೀಗ ಚಿತ್ರೀಕರಣ ಮುಕ್ತಾಯವಾಗಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
777 ಚಾರ್ಲಿ ಚಿತ್ರದ ಕಾಶ್ಮೀರ ಭಾಗದ ಅಂತಿಮ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ' ಎಂದು ಚಾರ್ಲಿತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ. ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರದ ಪ್ಯಾಚ್ ವರ್ಕ್ ಕೆಲಸವಿದ್ದು, ಬೆಂಗಳೂರಿನಲ್ಲಿ ಪ್ಯಾಚ್ ವರ್ಕ್ ಕೆಲಸ ಮುಗಿಸಿದರೆ ಚಾರ್ಲಿ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇನ್ನು ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದ ತುಂಬಾ ಶೀತ ವಾತಾವರಣದ ನಡುವೆಯೂ ಚಿತ್ರೀಕರಣ ಮಾಡಿದ್ದೇವೆ. ಇದು ಎಲ್ಲಕ್ಕಿಂತ ಕಷ್ಟಕರವಾದ ಹಂತವಾಗಿತ್ತು. ಆದರೆ ನಾವು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದೇವೆ. ಇನ್ನು 6 ದಿನಗಳ ಪ್ಯಾಚ್ ವರ್ಕ್ ಬೆಂಗಳೂರಿನಲ್ಲಿದೆ.' ಎಂದು ಬರೆದುಕೊಂಡಿದ್ದಾರೆ. ಈಗಾಗಲೇ 777 ಚಾರ್ಲಿ ಸಿನಿಮಾದ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಜೂನ್ ಅಥವಾ ಜುಲೈನಲ್ಲಿ ತೆರೆಗ ಬರುವ ಸಾಧ್ಯತೆ ಇದೆ. ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am