ಬ್ರೇಕಿಂಗ್ ನ್ಯೂಸ್
28-01-21 12:33 pm Source: FILMIBEAT Murulidhara ಸಿನಿಮಾ
ಬೆಂಗಳೂರು, ಜನವರಿ 28: ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ್ದ ಇಂದ್ರಜಿತ್ ಲಂಕೇಶ್ ಗೆ ಮತ್ತೊಮ್ಮೆ ಸಿಸಿಬಿ ಬುಲಾವ್ ನೀಡಿದೆ. ಸಿಸಿಬಿ ಡಿಸಿಪಿ ಬಸವರಾಜ ಅಂಗಡಿ ಮುಂದೆ ಹಾಜರಾಗಲು ಸೂಚಿಸಿದ್ದು, ಗುರುವಾರ ಬೆಳಗ್ಗೆ 11 ಗಂಟೆಗೆ ಇಂದ್ರಜಿತ್ ಪೊಲೀಸ್ ಅಯುಕ್ತರ ಕಚೇರಿಗೆ ಹಾಜರಾಗಲಿದ್ದಾರೆ. ಡ್ರಗ್ಸ್ ಕುರಿತು ಮತ್ತಷ್ಟು ಮಾಹಿತಿ ಪಡೆಯಲಿದ್ದಾರೆ.
ಈ ಹಿಂದೆ ಎರಡು ಬಾರಿ ಸಿಸಿಬಿ ಪೊಲೀಸರ ಕಚೇರಿಗೆ ಭೇಟಿ ನೀಡಿ ಸ್ಯಾಂಡಲ್ ವುಡ್ ಡ್ರಗ್ ಜಾಲದ ಬಗ್ಗೆ ಇಂಧ್ರಜಿತ್ ಲಂಕೇಶ್ ಮಾಹಿತಿ ನೀಡಿದ್ದರು. 2020 ಅಗಸ್ಟ್ 21 ಹಾಗೂ ಸೆಪ್ಟಂಬರ್ 2 ರಂದು ಎರಡು ಬಾರಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ಮಾಹಿತಿ ನೀಡಿದ್ದರು. ಡ್ರಗ್ ಪಾರ್ಟಿಯ ಚಿತ್ರಗಳಿದ್ದ ಪೆನ್ ಡ್ರೈವ್ ಸಿಸಿಬಿ ಪೊಲೀಸರಿಗೆ ನೀಡಿದ್ದರು. ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ನೀಡಿದ್ದ ಮಾಹಿತಿ ಸಿಸಿಬಿ ಪೊಲೀಸರಿಗೆ ಮಹತ್ವದ ಸುಳಿವು ನೀಡಿತ್ತು.
ಈ ಹಿನ್ನೆಲೆಯಲ್ಲಿ ಬಾಣಸವಾಡಿ ಠಾಣೆಯಲ್ಲಿ ದಾಖಲಾಗಿದ್ದ ಹಳೇ ಪ್ರಕರಣ ಮರು ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರು ಆರ್ ಟಿಓ ಅಧಕಾರಿ ರವಿಶಂಕರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ತದನಂತರ ನಟಿ ಐಂದ್ರಿತಾ ರೈ, ದಿಗಂತ್, ರಾಗಿಣಿ, ಸಂಜನಾ ಗಲ್ರಾಣಿ ಸೇರಿದಂತೆ ಸ್ಯಾಂಡಲ್ ವುಡ್ ನಟ- ನಟಿಯರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.
ನಟಿ ಸಂಜನಾ , ರಾಗಿಣಿ ಬಂಧನಕ್ಕೆ ಒಳಗಾಗಿದ್ದರು. ಆದಿತ್ವ ಆಳ್ವಾ ಕೂಡ ಇತ್ತೀಚೆಗೆ ಬಂಧನಕ್ಕೆ ಒಳಗಾಗಿದ್ದ. ಇನ್ನು ಡ್ರಗ್ ಡೀಲಿಂಗ್ ಕಿಂಗ್ ಪಿನ್ ಗಳಾದ ವೀರೇನ್ ಖನ್ನಾ, ರಾಹುಲ್ ತೋನ್ಸೆ, ಶಿವಪ್ರಕಾಶ್ ಸೇರಿದಂತೆ ಸ್ಯಾಂಡಲ್ ವುಡ್ ಡ್ರಗ್ ಡೀಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಇಂದ್ರಜಿತ್ ಲಂಕೇಶ್ ಅವರಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸಿಸಿಬಿ ಡಿಸಿಪಿ ಬಸವರಾಜ ಅಂಗಡಿ ಅವರ ಮುಂದೆ ಇಂದ್ರಜಿತ್ ಹಾಜರಾಗಲಿದ್ದು, ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಸಿಬಿ ಪೊಲೀಸರು ವಿಚಾರಣೆಗೆ ಬರುವಂತೆ ಕರೆದಿರುವುದು ನಿಜ. ನಾನು ಸಿಸಿಬಿ ಡಿಸಿಪಿ ಯವರನ್ನು ಭೇಟಿ ಮಾಡಲಿದ್ದೇನೆ. ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ ಬಳಿಕವಷ್ಟೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm