ಬ್ರೇಕಿಂಗ್ ನ್ಯೂಸ್
28-01-21 12:48 pm Source: FILMIBEAT Manjunatha C ಸಿನಿಮಾ
ತಮಿಳಿನ ಖ್ಯಾತ ನಟ ವಿಜಯ್ ವಿರುದ್ಧ ಚಿತ್ರಮಂದಿರಗಳ ಮಾಲೀಕರು, ಸಿನಿಮಾ ವಿತರಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ವಿಜಯ್ ನಟನೆಯ 'ಮಾಸ್ಟರ್' ಸಿನಿಮಾವನ್ನು ಜನವರಿ 29 ರಂದು ಅಮೆಜಾನ್ ಪ್ರೈಂ ನಲ್ಲಿ ಬಿಡುಗಡೆ ಮಾಡುವ ನಿರ್ಧಾರ ಇಂದು ಪ್ರಕಟಿಸಿದ್ದು, ಇದೇ ಕಾರಣಕ್ಕೆ ಚಿತ್ರಮಂದಿರ ಮಾಲೀಕರು ವಿಜಯ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊರೊನಾ ನಡುವೆಯೂ 'ಮಾಸ್ಟರ್' ಸಿನಿಮಾವನ್ನು ಚಿತ್ರಮಂದಿರಗಳಲ್ಲಿಯೇ ಬಿಡುಗಡೆ ಮಾಡಲಾಗಿತ್ತು. ವಿಜಯ್ ರ ಈ ನಿರ್ಣಯಕ್ಕೆ ಚಿತ್ರಮಂದಿರ ಮಾಲೀಕರು ಸಂತಸ ವ್ಯಕ್ತಪಡಿಸಿದ್ದರು. ಆದರೆ ಸಿನಿಮಾ ಬಿಡುಗಡೆ ಆಗಿ ಎರಡು ವಾರದಲ್ಲಿಯೇ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡುತ್ತಿರುವುದು ಚಿತ್ರಮಂದಿರ ಮಾಲೀಕರಿಗೆ ತೀವ್ರ ಬೇಸರ ತಂದಿದೆ.
'ಮಾಸ್ಟರ್' ಚಿತ್ರತಂಡದ ನಿರ್ಧಾರದ ಬಗ್ಗೆ ಬೇಸರ
'ಮಾಸ್ಟರ್' ಚಿತ್ರತಂಡದ ನಿರ್ಣಯದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ತಮಿಳುನಾಡು ಚಿತ್ರಮಂದಿರಗಳ ಮಾಲೀಕರ ಸಂಘದ ಅಧ್ಯಕ್ಷ ತಿರುಪೂರು ಸುಬ್ರಹ್ಮಣಿಯನ್, 'ನಾವು ಚಿತ್ರತಂಡವನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ' ಅವರೊಟ್ಟಿಗೆ ಮಾತನಾಡುತ್ತೇವೆ ಎಂದಿದ್ದಾರೆ.
ಚಿತ್ರಮಂದಿರಗಳಿಗೆ ಲಾಭ ಬರುವ ಮುಂಚೆಯೇ ಸಿನಿಮಾ ಮಾರಾಟ
ಸಾಮಾನ್ಯವಾಗಿ ಚಿತ್ರಮಂದಿರಗಳು ಲಾಭ ಮಾಡುವುದು ಮೂರನೇ ಅಥವಾ ನಾಲ್ಕನೇ ವಾರದ ಕಲೆಕ್ಷನ್ನಲ್ಲಿ. ಮೊದಲ ಎರಡು ವಾರದ ಕಲೆಕ್ಷನ್ ಚಿತ್ರ ನಿರ್ಮಾಪಕರಿಗೆ ಹೋಗುತ್ತದೆ. ಹೀಗಿದ್ದಾಗ ಎರಡೇ ವಾರಕ್ಕೆ ಸಿನಿಮಾವನ್ನು ಒಟಿಟಿಗೆ ಬಿಡುಗಡೆ ಮಾಡಿದರೆ ನಾವು ಲಾಭ ಕಾಣುವುದು ಹೇಗೆ ಎಂದು ಚೆನ್ನೈನ ಜನಪ್ರಿಯ ವೆಟ್ರಿ ಚಿತ್ರಮಂದಿರ ಮಾಲೀಕ ರಾಕೇಶ್ ಹೇಳಿದ್ದಾರೆ.
ಬಿಡುಗಡೆ ಆದ 16 ದಿನಕ್ಕೆ ಸಿನಿಮಾ ಮಾರಾಟ
ಸಿನಿಮಾ ಬಿಡುಗಡೆ ಮಾಡಿದ 16 ದಿನಕ್ಕೆ ಅದನ್ನು ಒಟಿಟಿಗೆ ನೀಡುತ್ತೇವೆ ಎಂದು ಚಿತ್ರತಂಡ ನಮಗೆ ಮೊದಲೇ ಹೇಳಿದ್ದರೆ, ನಾವು ಚಿತ್ರ ನಿರ್ಮಾಪಕರೊಂದಿಗೆ ಅಥವಾ ವಿತರಕರೊಂದಿಗೆ ಬೇರೆ ರೀತಿಯ ಲಾಭ ಹಂಚಿಕೆ ಒಪ್ಪಂದ ಮಾಡಿಕೊಂಡಿರುತ್ತಿದ್ದೆವು, ಈ ಹಠಾತ್ ನಿರ್ಣಯ ಚಿತ್ರಮಂದಿರಗಳ ಮಾಲೀಕರಿಗೆ ಮಾಡಿದ ಮೋಸವಾಗಿದೆ ಎಂದಿದ್ದಾರೆ ರಾಕೇಶ್.
ಜನವರಿ 13 ಕ್ಕೆ ಬಿಡುಗಡೆ ಆಗಿದ್ದ ಸಿನಿಮಾ
ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಇದೇ ಜನವರಿ 13 ರಂದು ಬಿಡುಗಡೆ ಆಗಿತ್ತು. ಇದೇ 29 ರಂದು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಕೆಲವೇ ದಿನಗಳಲ್ಲಿ ಈ ಸಿನಿಮಾವು 200 ಕೋಟಿ ಹಣ ಗಳಿಸಿ ಇನ್ನೂ ಚೆನ್ನಾಗಿಯೇ ಪ್ರದರ್ಶನ ಕಾಣುತ್ತಿತ್ತು. ಈ ನಡುವೆಯೇ ಸಿನಿಮಾವನ್ನು ಅಮೆಜಾನ್ ಪ್ರೈಂ ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
This News Article is a Copy of FILMIBEAT
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm