ಬ್ರೇಕಿಂಗ್ ನ್ಯೂಸ್
30-01-21 02:08 pm Source: FILMIBEAT ಸಿನಿಮಾ
ಸುಶಾಂತ್ ಸಿಂಗ್ ಸಾವು, ಡ್ರಗ್ಸ್ ಮಾಫಿಯಾ, ಬಾಲಿವುಡ್ ನೆಪೋಟಿಸಂ, ಮುಂಬೈ ಮಹಾನಗರ ಪಾಲಿಕೆ, ಮುಂಬೈ ಸರ್ಕಾರ ಹೀಗೆ...ಕಳೆದ ಆರೇಳು ತಿಂಗಳಿಂದ ನಟಿ ಕಂಗನಾ ಸಿನಿಮಾ ಬಿಟ್ಟು ಇನ್ನಿತರ ವಿಚಾರಕ್ಕಾಗಿಯೇ ಸುದ್ದಿಯಲ್ಲಿದ್ದರು. ಕಂಗನಾ ಕೊನೆಗೂ ತಲೈವಿ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಬಯೋಪಿಕ್ನಲ್ಲಿ ಕಂಗನಾ ನಟಿಸಿದ್ದು, ಪುರಚ್ಚಿ ತಲೈವಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ, ಮತ್ತೊಂದು ರಾಜಕೀಯ ಥ್ರಿಲ್ಲರ್ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದು, ಈ ಚಿತ್ರದಲ್ಲಿ ಭಾರತದ ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರಂತೆ.
ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ
ಇನ್ನು ಹೆಸರಿಡದ ಚಿತ್ರದಲ್ಲಿ ಕಂಗನಾ ನಟಿಸುತ್ತಿದ್ದಾರೆ. ಇದು ರಾಜಕೀಯ ಆಧರಿತ ಸಿನಿಮಾ ಆಗಿದೆ. ಈ ಚಿತ್ರದಲ್ಲಿ ಭಾರತದ ರಾಜಕೀಯ ರಂಗ ಕಂಡ ಹಲವರ ಪಾತ್ರ ಬರಲಿದೆ. ಅದರಲ್ಲಿ ಇಂದಿರಾ ಗಾಂಧಿ ಪಾತ್ರವೂ ಒಂದು. ಇಂದಿರಾ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳಲಿದ್ದಾರೆ.

ಬಯೋಪಿಕ್ ಅಲ್ಲ ಎಂದು ಸ್ಪಷ್ಟನೆ
ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಎಂದಾಕ್ಷಣ ಇದು ಬಯೋಪಿಕ್ ಚಿತ್ರವಾಗಿರಬಹುದಾ ಎಂಬ ಚರ್ಚೆ ಹುಟ್ಟಿಕೊಂಡಿತ್ತು. ಆದರೆ ಇದು ಬಯೋಪಿಕ್ ಅಲ್ಲ ಎಂದು ಸ್ವತಃ ಕಂಗನಾ ಸ್ಪಷ್ಟಪಡಿಸಿದ್ದಾರೆ. ಇದೊಂದು ಕಾಲಘಟ್ಟದ ಚಿತ್ರ. ಆ ಸಮಯದಲ್ಲಿ ಬರುವ ರಾಜಕಾರಣಿಗಳ ಪಾತ್ರ ಪ್ರಮುಖವಾಗಿರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬಹಳ ವರ್ಷದಿಂದಲೂ ಆಸೆ ಇತ್ತು
ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ನಟಿಸಬೇಕು ಎನ್ನುವುದು ಕಂಗನಾ ರಣಾವತ್ ಅವರಿಗೆ ಮೊದಲಿನಿಂದಲೂ ಆಸೆ ಇತ್ತು. ವೃತ್ತಿ ಜೀವನದ ಆರಂಭದಲ್ಲಿ ಇಂದಿರಾ ಗಾಂಧಿಯಂತೆ ಮೇಕಪ್ ಮಾಡಿ ಫೋಟೋಶೂಟ್ ಸಹ ಮಾಡಿಸಿದ್ದರು. ಆ ಫೋಟೋ ಈಗ ವೈರಲ್ ಆಗಿದೆ. ಒಂದಲ್ಲ ಒಂದು ದಿನ ಈ ಪಾತ್ರ ಮಾಡುತ್ತೇನೆ ಎಂದು ಮನಸ್ಸಿನಲ್ಲಿ ನಿರ್ಧರಿಸಿದ್ದರಂತೆ. ಈಗ, ಆ ಸಮಯ ಬಂದಿದೆ.

ಸಾಯಿ ಕಬೀರ್ ನಿರ್ದೇಶನ
ಸ್ಕ್ರಿಪ್ಟ್ ಕೆಲಸ ಕೊನೆಯ ಹಂತದಲ್ಲಿದೆ. ಈ ಚಿತ್ರವನ್ನು ಸಾಯಿ ಕಬೀರ್ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಕಂಗನಾ ನಟಿಸಿದ್ದ ರಿವಾಲ್ವರ್ ರಾಣಿ ಚಿತ್ರವನ್ನು ಕಬೀರ್ ನಿರ್ದೇಶಿಸಿದ್ದರು. ಇದೀಗ, ಹೊಸ ಪ್ರಾಜೆಕ್ಟ್ಗೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಸಹ ಹೇಳಲು ತಯಾರಿ ನಡೆಸಿದ್ದಾರೆ.
This News Article is a Copy of FILMIBEAT
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm