ಬ್ರೇಕಿಂಗ್ ನ್ಯೂಸ್
30-01-21 02:08 pm Source: FILMIBEAT ಸಿನಿಮಾ
ಸುಶಾಂತ್ ಸಿಂಗ್ ಸಾವು, ಡ್ರಗ್ಸ್ ಮಾಫಿಯಾ, ಬಾಲಿವುಡ್ ನೆಪೋಟಿಸಂ, ಮುಂಬೈ ಮಹಾನಗರ ಪಾಲಿಕೆ, ಮುಂಬೈ ಸರ್ಕಾರ ಹೀಗೆ...ಕಳೆದ ಆರೇಳು ತಿಂಗಳಿಂದ ನಟಿ ಕಂಗನಾ ಸಿನಿಮಾ ಬಿಟ್ಟು ಇನ್ನಿತರ ವಿಚಾರಕ್ಕಾಗಿಯೇ ಸುದ್ದಿಯಲ್ಲಿದ್ದರು. ಕಂಗನಾ ಕೊನೆಗೂ ತಲೈವಿ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಬಯೋಪಿಕ್ನಲ್ಲಿ ಕಂಗನಾ ನಟಿಸಿದ್ದು, ಪುರಚ್ಚಿ ತಲೈವಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ, ಮತ್ತೊಂದು ರಾಜಕೀಯ ಥ್ರಿಲ್ಲರ್ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದು, ಈ ಚಿತ್ರದಲ್ಲಿ ಭಾರತದ ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರಂತೆ.
ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ
ಇನ್ನು ಹೆಸರಿಡದ ಚಿತ್ರದಲ್ಲಿ ಕಂಗನಾ ನಟಿಸುತ್ತಿದ್ದಾರೆ. ಇದು ರಾಜಕೀಯ ಆಧರಿತ ಸಿನಿಮಾ ಆಗಿದೆ. ಈ ಚಿತ್ರದಲ್ಲಿ ಭಾರತದ ರಾಜಕೀಯ ರಂಗ ಕಂಡ ಹಲವರ ಪಾತ್ರ ಬರಲಿದೆ. ಅದರಲ್ಲಿ ಇಂದಿರಾ ಗಾಂಧಿ ಪಾತ್ರವೂ ಒಂದು. ಇಂದಿರಾ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳಲಿದ್ದಾರೆ.
ಬಯೋಪಿಕ್ ಅಲ್ಲ ಎಂದು ಸ್ಪಷ್ಟನೆ
ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಎಂದಾಕ್ಷಣ ಇದು ಬಯೋಪಿಕ್ ಚಿತ್ರವಾಗಿರಬಹುದಾ ಎಂಬ ಚರ್ಚೆ ಹುಟ್ಟಿಕೊಂಡಿತ್ತು. ಆದರೆ ಇದು ಬಯೋಪಿಕ್ ಅಲ್ಲ ಎಂದು ಸ್ವತಃ ಕಂಗನಾ ಸ್ಪಷ್ಟಪಡಿಸಿದ್ದಾರೆ. ಇದೊಂದು ಕಾಲಘಟ್ಟದ ಚಿತ್ರ. ಆ ಸಮಯದಲ್ಲಿ ಬರುವ ರಾಜಕಾರಣಿಗಳ ಪಾತ್ರ ಪ್ರಮುಖವಾಗಿರಲಿದೆ ಎಂದು ಮಾಹಿತಿ ನೀಡಿದ್ದಾರೆ.
ಬಹಳ ವರ್ಷದಿಂದಲೂ ಆಸೆ ಇತ್ತು
ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ನಟಿಸಬೇಕು ಎನ್ನುವುದು ಕಂಗನಾ ರಣಾವತ್ ಅವರಿಗೆ ಮೊದಲಿನಿಂದಲೂ ಆಸೆ ಇತ್ತು. ವೃತ್ತಿ ಜೀವನದ ಆರಂಭದಲ್ಲಿ ಇಂದಿರಾ ಗಾಂಧಿಯಂತೆ ಮೇಕಪ್ ಮಾಡಿ ಫೋಟೋಶೂಟ್ ಸಹ ಮಾಡಿಸಿದ್ದರು. ಆ ಫೋಟೋ ಈಗ ವೈರಲ್ ಆಗಿದೆ. ಒಂದಲ್ಲ ಒಂದು ದಿನ ಈ ಪಾತ್ರ ಮಾಡುತ್ತೇನೆ ಎಂದು ಮನಸ್ಸಿನಲ್ಲಿ ನಿರ್ಧರಿಸಿದ್ದರಂತೆ. ಈಗ, ಆ ಸಮಯ ಬಂದಿದೆ.
ಸಾಯಿ ಕಬೀರ್ ನಿರ್ದೇಶನ
ಸ್ಕ್ರಿಪ್ಟ್ ಕೆಲಸ ಕೊನೆಯ ಹಂತದಲ್ಲಿದೆ. ಈ ಚಿತ್ರವನ್ನು ಸಾಯಿ ಕಬೀರ್ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಕಂಗನಾ ನಟಿಸಿದ್ದ ರಿವಾಲ್ವರ್ ರಾಣಿ ಚಿತ್ರವನ್ನು ಕಬೀರ್ ನಿರ್ದೇಶಿಸಿದ್ದರು. ಇದೀಗ, ಹೊಸ ಪ್ರಾಜೆಕ್ಟ್ಗೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಸಹ ಹೇಳಲು ತಯಾರಿ ನಡೆಸಿದ್ದಾರೆ.
This News Article is a Copy of FILMIBEAT
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm