ಬ್ರೇಕಿಂಗ್ ನ್ಯೂಸ್
30-01-21 02:08 pm Source: FILMIBEAT ಸಿನಿಮಾ
ಸುಶಾಂತ್ ಸಿಂಗ್ ಸಾವು, ಡ್ರಗ್ಸ್ ಮಾಫಿಯಾ, ಬಾಲಿವುಡ್ ನೆಪೋಟಿಸಂ, ಮುಂಬೈ ಮಹಾನಗರ ಪಾಲಿಕೆ, ಮುಂಬೈ ಸರ್ಕಾರ ಹೀಗೆ...ಕಳೆದ ಆರೇಳು ತಿಂಗಳಿಂದ ನಟಿ ಕಂಗನಾ ಸಿನಿಮಾ ಬಿಟ್ಟು ಇನ್ನಿತರ ವಿಚಾರಕ್ಕಾಗಿಯೇ ಸುದ್ದಿಯಲ್ಲಿದ್ದರು. ಕಂಗನಾ ಕೊನೆಗೂ ತಲೈವಿ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಬಯೋಪಿಕ್ನಲ್ಲಿ ಕಂಗನಾ ನಟಿಸಿದ್ದು, ಪುರಚ್ಚಿ ತಲೈವಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ, ಮತ್ತೊಂದು ರಾಜಕೀಯ ಥ್ರಿಲ್ಲರ್ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದು, ಈ ಚಿತ್ರದಲ್ಲಿ ಭಾರತದ ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರಂತೆ.
ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ
ಇನ್ನು ಹೆಸರಿಡದ ಚಿತ್ರದಲ್ಲಿ ಕಂಗನಾ ನಟಿಸುತ್ತಿದ್ದಾರೆ. ಇದು ರಾಜಕೀಯ ಆಧರಿತ ಸಿನಿಮಾ ಆಗಿದೆ. ಈ ಚಿತ್ರದಲ್ಲಿ ಭಾರತದ ರಾಜಕೀಯ ರಂಗ ಕಂಡ ಹಲವರ ಪಾತ್ರ ಬರಲಿದೆ. ಅದರಲ್ಲಿ ಇಂದಿರಾ ಗಾಂಧಿ ಪಾತ್ರವೂ ಒಂದು. ಇಂದಿರಾ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳಲಿದ್ದಾರೆ.
ಬಯೋಪಿಕ್ ಅಲ್ಲ ಎಂದು ಸ್ಪಷ್ಟನೆ
ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಎಂದಾಕ್ಷಣ ಇದು ಬಯೋಪಿಕ್ ಚಿತ್ರವಾಗಿರಬಹುದಾ ಎಂಬ ಚರ್ಚೆ ಹುಟ್ಟಿಕೊಂಡಿತ್ತು. ಆದರೆ ಇದು ಬಯೋಪಿಕ್ ಅಲ್ಲ ಎಂದು ಸ್ವತಃ ಕಂಗನಾ ಸ್ಪಷ್ಟಪಡಿಸಿದ್ದಾರೆ. ಇದೊಂದು ಕಾಲಘಟ್ಟದ ಚಿತ್ರ. ಆ ಸಮಯದಲ್ಲಿ ಬರುವ ರಾಜಕಾರಣಿಗಳ ಪಾತ್ರ ಪ್ರಮುಖವಾಗಿರಲಿದೆ ಎಂದು ಮಾಹಿತಿ ನೀಡಿದ್ದಾರೆ.
ಬಹಳ ವರ್ಷದಿಂದಲೂ ಆಸೆ ಇತ್ತು
ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ನಟಿಸಬೇಕು ಎನ್ನುವುದು ಕಂಗನಾ ರಣಾವತ್ ಅವರಿಗೆ ಮೊದಲಿನಿಂದಲೂ ಆಸೆ ಇತ್ತು. ವೃತ್ತಿ ಜೀವನದ ಆರಂಭದಲ್ಲಿ ಇಂದಿರಾ ಗಾಂಧಿಯಂತೆ ಮೇಕಪ್ ಮಾಡಿ ಫೋಟೋಶೂಟ್ ಸಹ ಮಾಡಿಸಿದ್ದರು. ಆ ಫೋಟೋ ಈಗ ವೈರಲ್ ಆಗಿದೆ. ಒಂದಲ್ಲ ಒಂದು ದಿನ ಈ ಪಾತ್ರ ಮಾಡುತ್ತೇನೆ ಎಂದು ಮನಸ್ಸಿನಲ್ಲಿ ನಿರ್ಧರಿಸಿದ್ದರಂತೆ. ಈಗ, ಆ ಸಮಯ ಬಂದಿದೆ.
ಸಾಯಿ ಕಬೀರ್ ನಿರ್ದೇಶನ
ಸ್ಕ್ರಿಪ್ಟ್ ಕೆಲಸ ಕೊನೆಯ ಹಂತದಲ್ಲಿದೆ. ಈ ಚಿತ್ರವನ್ನು ಸಾಯಿ ಕಬೀರ್ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಕಂಗನಾ ನಟಿಸಿದ್ದ ರಿವಾಲ್ವರ್ ರಾಣಿ ಚಿತ್ರವನ್ನು ಕಬೀರ್ ನಿರ್ದೇಶಿಸಿದ್ದರು. ಇದೀಗ, ಹೊಸ ಪ್ರಾಜೆಕ್ಟ್ಗೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಸಹ ಹೇಳಲು ತಯಾರಿ ನಡೆಸಿದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 04:46 pm
Mangalore Correspondent
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
06-09-25 05:26 pm
HK News Desk
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm