ಬ್ರೇಕಿಂಗ್ ನ್ಯೂಸ್
30-01-21 02:08 pm Source: FILMIBEAT ಸಿನಿಮಾ
ಸುಶಾಂತ್ ಸಿಂಗ್ ಸಾವು, ಡ್ರಗ್ಸ್ ಮಾಫಿಯಾ, ಬಾಲಿವುಡ್ ನೆಪೋಟಿಸಂ, ಮುಂಬೈ ಮಹಾನಗರ ಪಾಲಿಕೆ, ಮುಂಬೈ ಸರ್ಕಾರ ಹೀಗೆ...ಕಳೆದ ಆರೇಳು ತಿಂಗಳಿಂದ ನಟಿ ಕಂಗನಾ ಸಿನಿಮಾ ಬಿಟ್ಟು ಇನ್ನಿತರ ವಿಚಾರಕ್ಕಾಗಿಯೇ ಸುದ್ದಿಯಲ್ಲಿದ್ದರು. ಕಂಗನಾ ಕೊನೆಗೂ ತಲೈವಿ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಬಯೋಪಿಕ್ನಲ್ಲಿ ಕಂಗನಾ ನಟಿಸಿದ್ದು, ಪುರಚ್ಚಿ ತಲೈವಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ, ಮತ್ತೊಂದು ರಾಜಕೀಯ ಥ್ರಿಲ್ಲರ್ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದು, ಈ ಚಿತ್ರದಲ್ಲಿ ಭಾರತದ ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರಂತೆ.
ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ
ಇನ್ನು ಹೆಸರಿಡದ ಚಿತ್ರದಲ್ಲಿ ಕಂಗನಾ ನಟಿಸುತ್ತಿದ್ದಾರೆ. ಇದು ರಾಜಕೀಯ ಆಧರಿತ ಸಿನಿಮಾ ಆಗಿದೆ. ಈ ಚಿತ್ರದಲ್ಲಿ ಭಾರತದ ರಾಜಕೀಯ ರಂಗ ಕಂಡ ಹಲವರ ಪಾತ್ರ ಬರಲಿದೆ. ಅದರಲ್ಲಿ ಇಂದಿರಾ ಗಾಂಧಿ ಪಾತ್ರವೂ ಒಂದು. ಇಂದಿರಾ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳಲಿದ್ದಾರೆ.

ಬಯೋಪಿಕ್ ಅಲ್ಲ ಎಂದು ಸ್ಪಷ್ಟನೆ
ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಎಂದಾಕ್ಷಣ ಇದು ಬಯೋಪಿಕ್ ಚಿತ್ರವಾಗಿರಬಹುದಾ ಎಂಬ ಚರ್ಚೆ ಹುಟ್ಟಿಕೊಂಡಿತ್ತು. ಆದರೆ ಇದು ಬಯೋಪಿಕ್ ಅಲ್ಲ ಎಂದು ಸ್ವತಃ ಕಂಗನಾ ಸ್ಪಷ್ಟಪಡಿಸಿದ್ದಾರೆ. ಇದೊಂದು ಕಾಲಘಟ್ಟದ ಚಿತ್ರ. ಆ ಸಮಯದಲ್ಲಿ ಬರುವ ರಾಜಕಾರಣಿಗಳ ಪಾತ್ರ ಪ್ರಮುಖವಾಗಿರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬಹಳ ವರ್ಷದಿಂದಲೂ ಆಸೆ ಇತ್ತು
ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ನಟಿಸಬೇಕು ಎನ್ನುವುದು ಕಂಗನಾ ರಣಾವತ್ ಅವರಿಗೆ ಮೊದಲಿನಿಂದಲೂ ಆಸೆ ಇತ್ತು. ವೃತ್ತಿ ಜೀವನದ ಆರಂಭದಲ್ಲಿ ಇಂದಿರಾ ಗಾಂಧಿಯಂತೆ ಮೇಕಪ್ ಮಾಡಿ ಫೋಟೋಶೂಟ್ ಸಹ ಮಾಡಿಸಿದ್ದರು. ಆ ಫೋಟೋ ಈಗ ವೈರಲ್ ಆಗಿದೆ. ಒಂದಲ್ಲ ಒಂದು ದಿನ ಈ ಪಾತ್ರ ಮಾಡುತ್ತೇನೆ ಎಂದು ಮನಸ್ಸಿನಲ್ಲಿ ನಿರ್ಧರಿಸಿದ್ದರಂತೆ. ಈಗ, ಆ ಸಮಯ ಬಂದಿದೆ.

ಸಾಯಿ ಕಬೀರ್ ನಿರ್ದೇಶನ
ಸ್ಕ್ರಿಪ್ಟ್ ಕೆಲಸ ಕೊನೆಯ ಹಂತದಲ್ಲಿದೆ. ಈ ಚಿತ್ರವನ್ನು ಸಾಯಿ ಕಬೀರ್ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಕಂಗನಾ ನಟಿಸಿದ್ದ ರಿವಾಲ್ವರ್ ರಾಣಿ ಚಿತ್ರವನ್ನು ಕಬೀರ್ ನಿರ್ದೇಶಿಸಿದ್ದರು. ಇದೀಗ, ಹೊಸ ಪ್ರಾಜೆಕ್ಟ್ಗೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಸಹ ಹೇಳಲು ತಯಾರಿ ನಡೆಸಿದ್ದಾರೆ.
This News Article is a Copy of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm