ಬ್ರೇಕಿಂಗ್ ನ್ಯೂಸ್
01-02-21 12:30 pm Source: FILMIBEAT ಸಿನಿಮಾ
ಇಂದಿನಿಂದ (ಫೆಬ್ರವರಿ 1) ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರು ಸಿನಿಮಾ ವೀಕ್ಷಿಸಬಹುದು. ಇತ್ತೀಚಿಗಷ್ಟೆ ಕೇಂದ್ರ ಸರ್ಕಾರ ಶೇ.100 ಆಸನ ಭರ್ತಿಗೆ ಅವಕಾಶ ನೀಡಿತ್ತು. ಹೊಸ ಮಾರ್ಗಸೂಚಿ ಜಾರಿಗೊಳಿಸಿ, ಪೂರ್ಣ ಪ್ರಮಾಣದ ಚಿತ್ರಮಂದಿರಗಳನ್ನು ಓಪನ್ ಮಾಡಲು ಅನುಮತಿ ನೀಡಿದೆ.
ಕೇಂದ್ರ ಗೃಹ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಿನಿಮಾ ಪ್ರದರ್ಶನ ಮಾಡುವಂತೆ ತಿಳಿಸಿದೆ. ಕಂಟೈನ್ ಮೆಂಟ್ ವಲಯಗಳಲ್ಲಿ ಮಾತ್ರ ಹಿಂದೆ ಇದ್ದ ನಿಯಮಗಳು ಮುಂದುವರೆಯಲಿದೆ.
ಚಿತ್ರಮಂದಿರಗಳಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ ಹಾಗೂ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚಿಸಿದೆ.
ಸುಮಾರು 11 ತಿಂಗಳಿಂದ ಅಂದರೆ 2020 ಮಾರ್ಚ್ ನಲ್ಲಿ ಆದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕ್ಕಿದ್ದ ಚಿತ್ರಮಂದಿರಗಳ ಮಾಲಿಕರು ಇದೀಗ ಸಂತಸ ತಂದಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಚಿತ್ರಮಂದಿರಗಳನ್ನು ಓಪನ್ ಮಾಡಲು ಅವಕಾಶ ನೀಡಿತ್ತಾದರೂ, ಪೂರ್ಣ ಪ್ರಮಾಣದ ಆಸನ ಭರ್ತಿಗೆ ಅವಕಾಶವಿರಲಿಲ್ಲ.
ಜನವರಿಯಿಂದಾದರೂ ಪೂರ್ಣಪ್ರಮಾಣದ ಅವಕಾಶ ಸಿಗುತ್ತಾ ಎಂದು ಸಿನಿಮಾ ಮಂದಿ ಕಾಯುತ್ತಿದ್ದರು. ಆದಕೆ ಜನವರಿ ತಿಂಗಳು ಸಹ ನಿರಾಸೆ ಮೂಡಿಸಿತ್ತು. ಶೇ.50ರಷ್ಟು ಆಸನದಲ್ಲೇ ಅನೇಕ ಸಿನಿಮಾಗಳು ರಿಲೀಸ್ ಆಗಿದೆ. ಇತ್ತೀಚಿಗೆ ತಮಿಳುನಾಡು ಸರ್ಕಾರ ಪರ್ಣ ಪ್ರಮಾಣದ ಅವಕಾಶ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆ ಅವಕಾಶವನ್ನು ಹಿಂಪಡೆದಿತ್ತು.
ಬಿಗ್ ಬಜೆಟ್ ನ ಬಿಗ್ ಸ್ಟಾರ್ ಸಿನಿಮಾ ಮಾಸ್ಟರ್ ಶೇ. 50 ಆಸನದಲ್ಲೇ ರಿಲೀಸ್ ಆಗಿ, ದೊಡ್ಡ ಮಟ್ಟದ ಯಶಸ್ಸು ಗಳಿಸಿದೆ. ಸದ್ಯ ಇವತ್ತಿನಿಂದ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ಕುಳಿತು ಸಿನಿಮಾ ವೀಕ್ಷಿಸಬಹುದಾಗಿದ್ದು, ಈ ನಿರ್ಧಾರ ಸಿನಿಮಾಮಂದಿಗೆ ಸಂತಸ ತಂದಿದೆ.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm