ಬ್ರೇಕಿಂಗ್ ನ್ಯೂಸ್
01-02-21 12:30 pm Source: FILMIBEAT ಸಿನಿಮಾ
ಇಂದಿನಿಂದ (ಫೆಬ್ರವರಿ 1) ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರು ಸಿನಿಮಾ ವೀಕ್ಷಿಸಬಹುದು. ಇತ್ತೀಚಿಗಷ್ಟೆ ಕೇಂದ್ರ ಸರ್ಕಾರ ಶೇ.100 ಆಸನ ಭರ್ತಿಗೆ ಅವಕಾಶ ನೀಡಿತ್ತು. ಹೊಸ ಮಾರ್ಗಸೂಚಿ ಜಾರಿಗೊಳಿಸಿ, ಪೂರ್ಣ ಪ್ರಮಾಣದ ಚಿತ್ರಮಂದಿರಗಳನ್ನು ಓಪನ್ ಮಾಡಲು ಅನುಮತಿ ನೀಡಿದೆ.
ಕೇಂದ್ರ ಗೃಹ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಿನಿಮಾ ಪ್ರದರ್ಶನ ಮಾಡುವಂತೆ ತಿಳಿಸಿದೆ. ಕಂಟೈನ್ ಮೆಂಟ್ ವಲಯಗಳಲ್ಲಿ ಮಾತ್ರ ಹಿಂದೆ ಇದ್ದ ನಿಯಮಗಳು ಮುಂದುವರೆಯಲಿದೆ.
ಚಿತ್ರಮಂದಿರಗಳಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ ಹಾಗೂ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚಿಸಿದೆ.
ಸುಮಾರು 11 ತಿಂಗಳಿಂದ ಅಂದರೆ 2020 ಮಾರ್ಚ್ ನಲ್ಲಿ ಆದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕ್ಕಿದ್ದ ಚಿತ್ರಮಂದಿರಗಳ ಮಾಲಿಕರು ಇದೀಗ ಸಂತಸ ತಂದಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಚಿತ್ರಮಂದಿರಗಳನ್ನು ಓಪನ್ ಮಾಡಲು ಅವಕಾಶ ನೀಡಿತ್ತಾದರೂ, ಪೂರ್ಣ ಪ್ರಮಾಣದ ಆಸನ ಭರ್ತಿಗೆ ಅವಕಾಶವಿರಲಿಲ್ಲ.
ಜನವರಿಯಿಂದಾದರೂ ಪೂರ್ಣಪ್ರಮಾಣದ ಅವಕಾಶ ಸಿಗುತ್ತಾ ಎಂದು ಸಿನಿಮಾ ಮಂದಿ ಕಾಯುತ್ತಿದ್ದರು. ಆದಕೆ ಜನವರಿ ತಿಂಗಳು ಸಹ ನಿರಾಸೆ ಮೂಡಿಸಿತ್ತು. ಶೇ.50ರಷ್ಟು ಆಸನದಲ್ಲೇ ಅನೇಕ ಸಿನಿಮಾಗಳು ರಿಲೀಸ್ ಆಗಿದೆ. ಇತ್ತೀಚಿಗೆ ತಮಿಳುನಾಡು ಸರ್ಕಾರ ಪರ್ಣ ಪ್ರಮಾಣದ ಅವಕಾಶ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆ ಅವಕಾಶವನ್ನು ಹಿಂಪಡೆದಿತ್ತು.
ಬಿಗ್ ಬಜೆಟ್ ನ ಬಿಗ್ ಸ್ಟಾರ್ ಸಿನಿಮಾ ಮಾಸ್ಟರ್ ಶೇ. 50 ಆಸನದಲ್ಲೇ ರಿಲೀಸ್ ಆಗಿ, ದೊಡ್ಡ ಮಟ್ಟದ ಯಶಸ್ಸು ಗಳಿಸಿದೆ. ಸದ್ಯ ಇವತ್ತಿನಿಂದ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ಕುಳಿತು ಸಿನಿಮಾ ವೀಕ್ಷಿಸಬಹುದಾಗಿದ್ದು, ಈ ನಿರ್ಧಾರ ಸಿನಿಮಾಮಂದಿಗೆ ಸಂತಸ ತಂದಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm