ಬ್ರೇಕಿಂಗ್ ನ್ಯೂಸ್
15-08-20 12:19 pm Headline Karnataka News Network ಸಿನಿಮಾ
ಧಾರವಾಡ, ಆಗಸ್ಟ್ 15: ನಟ ದರ್ಶನ್ ಮೇಕೆ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡಕ್ಕೆ ಆಗಮಿಸಿರುವ ದರ್ಶನ್, ಮಾಜಿ ಸಚಿವ ವಿನಯ್ ಕುಲಕರ್ಣಿ ಡೈರಿಗೆ ಭೇಟಿ ನೀಡಿದ್ದಾರೆ.
ವಿನಯ ಕುಲಕರ್ಣಿ ಅವರ ಬಳಿ 30 ಜಮುನಾಪೂರಿ ಮೇಕೆಯನ್ನು ಖರೀದಿ ಮಾಡಿರುವ ನಟ ದರ್ಶನ್, ನಾನು ಮೇಕೆ ಸಾಕಾಣಿಕೆ ಮಾಡುತ್ತಿರುವ ಹಿನ್ನೆಲೆ ಧಾರವಾಡಕ್ಕೆ ಮೇಕೆ ಖರೀದಿಗೆ ಬಂದಿದ್ದೇನೆ ಎಂದು ಹೇಳಿದರು. ಇವತ್ತು ಬೆಳಿಗ್ಗೆಯಿಂದ ಡೇರಿಯಲ್ಲೇ ಚಕ್ಕಡಿ ಓಡಿಸಿದ್ದ ದರ್ಶನ್, ನಾನು ಲ್ಯಾಂಬೊರ್ಗಿನಿ ಓಡಿಸೋಕು ರೇಡಿ, ಚಕ್ಕಡಿ ಓಡಿಸೋಕೂ ರೆಡಿ ಎಂದು ಹೇಳಿದರು.
ಈ ಮೊದಲು ಹಸುಗಳನ್ನು ಕೂಡಾ ಇಲ್ಲೇ ಖರೀದಿ ಮಾಡಿದ್ದೇನೆ ಎಂದ ದರ್ಶನ್, ವಿನಯ ಕುಲಕರ್ಣಿ ಬಳಿ ಎತ್ತುಗಳು ಚನ್ನಾಗಿವೆ ಎಂದು ಹೇಳಿದರು. ಇದೇ ವೇಳೆ ದರ್ಶನ್ ಬಗ್ಗೆ ಮಾತನಾಡಿದ ವಿನಯ್ ಕುಲಕರ್ಣಿ, ದರ್ಶನ್ ಮೊದಲಿನಿಂದಲೂ ಪ್ರಾಣಿ ಪ್ರಿಯ. ಮೊದಲು ಹಸುಗಳ ಹಾಲನ್ನು ಕೂಡಾ ಅವರು ಮನೆಗಳಿಗೆ ಕೊಟ್ಟಿದ್ದನ್ನು ನಾನು ನೋಡಿದ್ದೇನೆ ಎಂದು ದರ್ಶನ್ ಬಗ್ಗೆ ಹೊಗಳಿದ ವಿನಯ್ ಕುಲಕರ್ಣಿ, ಇವತ್ತು ನಾನು ದರ್ಶನ್ ಅವರಿಗೆ ಜೀವಂತ ಮೇಕೆಯನ್ನು ಪ್ರತಿ ಕೆಜಿಗೆ 400ರಂತೆ ಕೊಟ್ಟಿದ್ದೇನೆ ಎಂದು ಹೇಳಿದರು.
ದರ್ಶನ್ ಇದೇ ಡೈರಿಯಲ್ಲಿ ಒಂದು ಕುದುರೆಯನ್ನು ಕೂಡಾ ಖರೀದಿ ಮಾಡಿ ತೆಗೆದುಕೊಂಡು ಹೋಗುತ್ತಿದ್ದಾರೆ. ನಟ ದರ್ಶನ್ ವಿನಯ್ ಡೈರಿಗೆ ಬಂದಿದ್ದಾರೆ ಎಂದು ತಿಳಿದ ಅಭಿಮಾನಿಗಳು ಸಾಲು ಸಾಲಾಗಿ ಬಂದು ಕಾದರು. ನಂತರ ದರ್ಶನ್ ಅವರನ್ನು ಭೇಟಿ ಮಾಡಿ ಸಂತಸಪಟ್ಟರು.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm