ಬ್ರೇಕಿಂಗ್ ನ್ಯೂಸ್
02-02-21 01:52 pm Source: FILMIBEAT Manjunatha C ಸಿನಿಮಾ
ಡಬ್ಬಿಂಗ್ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥ, ನಿರ್ಮಾಪಕ ಸಾ.ರಾ.ಗೋವಿಂದು. ಡಬ್ಬಿಂಗ್ ಹಾವಳಿ ವಿರುದ್ಧ ಅಸಮಾಧಾನಗೊಂಡ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಇಂದು ಫಿಲಂ ಛೇಂಬರ್ಗೆ ಭೇಟಿ ನೀಡಿ ಸಾ.ರಾ.ಗೋವಿಂದು ಅವರೊಂದಿಗೆ ಚರ್ಚೆ ನಡೆದು, ಅವರಿಗೆ ಮನವಿ ಅರ್ಜಿಯೊಂದನ್ನು ನೀಡಿದರು.
ಈ ಸಂದರ್ಭದಲ್ಲಿ ಡಬ್ಬಿಂಗ್ ವಿರುದ್ಧ ತಾವು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಡಿರುವ ಹೋರಾಟದ ಬಗ್ಗೆ ಮಾತನಾಡಿದ ಸಾ.ರಾ.ಗೋವಿಂದು, 'ನ್ಯಾಯಾಲಯದ ಆದೇಶಗಳು ನಮ್ಮ ಕೈ ಕಟ್ಟಿಹಾಕಿವೆ' ಎಂದು ಅಸಮಾಧಾನ ಹೊರಹಾಕಿದರು.
ಈ ಹಿಂದೆ ಅನ್ಯ ಭಾಷೆಗಳ ಸಿನಿಮಾಗಳಿಗೆ ಇಂತಿಷ್ಟೇ ಚಿತ್ರಮಂದಿರವನ್ನು ಮಾತ್ರವೇ ನೀಡಬೇಕು ಎಂಬ ನಿಯಮ ಮಾಡಿಕೊಂಡಿದ್ದೆವು. ಆಗ 'ರಾ ಒನ್' ಎಂಬ ಸಿನಿಮಾ ಬಿಡುಗಡೆ ಆಯ್ತು. ಅವರಿಗೆ ನಿಯಮದಂತೆ ಕೆಲವು ಸಿನಿಮಾ ಮಂದಿರಗಳನ್ನು ನೀಡಿದೆವು, ಅವರು ನಮ್ಮ ವಿರುದ್ಧ ನ್ಯಾಯಾಲಯಕ್ಕೆ ಹೋಗಿ ಗೆದ್ದರು. ಅಂದಿನಿಂದ ಯಾವ ಭಾಷೆಯ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ಬೇಕಾದರೂ ಬಿಡುಗಡೆ ಆಗಬಹುದು ಎಂಬಂತಾಗಿದೆ ಎಂದರು ಸಾ.ರಾ.ಗೋವಿಂದು. ಬಾಹುಬಲಿ ಸಿನಿಮಾವನ್ನು ರಾಜ್ಯದಲ್ಲಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರು.
ಎದೆಗೆ ಗುಂಡು ಹೊಡೆದ ಅನುಭವವಾಯಿತು. ಆದರೆ ನ್ಯಾಯಾಲಯದ ಆದೇಶಗಳು ನಮ್ಮನ್ನು ಕಟ್ಟಿಹಾಕಿವೆ. ನಿಮ್ಮಂಥಹವರು ಆದರೂ ಇದರ ಬಗ್ಗೆ ಪ್ರತಿಭಟಿಸುತ್ತಿದ್ದೀರ, ನಿಮಗೆ ನನ್ನ ಗೌರವ ಇದ್ದೇ ಇರುತ್ತದೆ ಎಂದರು ಸಾ.ರಾ.ಗೋವಿಂದು.
'ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕರ್ನಾಕಟದಲ್ಲಿ ಕನ್ನಡದಲ್ಲಿ, ಆಂಧ್ರ, ತೆಲಂಗಾಣಗಳಲ್ಲಿ ತೆಲುಗಿನಲ್ಲಿ, ಕೇರಳದಲ್ಲಿ ಮಲಯಾಳಂ ನಲ್ಲಿ ಬಿಡುಗಡೆ ಆಗಿದೆ. ಇದಕ್ಕೇನು ಅರ್ಥವಿಲ್ಲವೇ, ಭಾಷೆಯ ಬಗ್ಗೆ ಗೌರವ ಬೇಡವೇ, ನಮ್ಮ ಭಾಷೆ ಏನಾಯ್ತು, ಈ ನ್ಯಾಯಾಲಯಗಳಿಗೆ ಇದೆಲ್ಲಾ ಯಾಕೆ ಅರ್ಥವಾಗುತ್ತಿಲ್ಲ' ಎಂದು ಸಾ.ರಾ.ಗೋವಿಂದು ಅಸಮಾಧಾನ ಹೊರಹಾಕಿದ್ದಾರೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm