ಬ್ರೇಕಿಂಗ್ ನ್ಯೂಸ್
02-02-21 01:52 pm Source: FILMIBEAT Manjunatha C ಸಿನಿಮಾ
ಡಬ್ಬಿಂಗ್ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥ, ನಿರ್ಮಾಪಕ ಸಾ.ರಾ.ಗೋವಿಂದು. ಡಬ್ಬಿಂಗ್ ಹಾವಳಿ ವಿರುದ್ಧ ಅಸಮಾಧಾನಗೊಂಡ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಇಂದು ಫಿಲಂ ಛೇಂಬರ್ಗೆ ಭೇಟಿ ನೀಡಿ ಸಾ.ರಾ.ಗೋವಿಂದು ಅವರೊಂದಿಗೆ ಚರ್ಚೆ ನಡೆದು, ಅವರಿಗೆ ಮನವಿ ಅರ್ಜಿಯೊಂದನ್ನು ನೀಡಿದರು.
ಈ ಸಂದರ್ಭದಲ್ಲಿ ಡಬ್ಬಿಂಗ್ ವಿರುದ್ಧ ತಾವು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಡಿರುವ ಹೋರಾಟದ ಬಗ್ಗೆ ಮಾತನಾಡಿದ ಸಾ.ರಾ.ಗೋವಿಂದು, 'ನ್ಯಾಯಾಲಯದ ಆದೇಶಗಳು ನಮ್ಮ ಕೈ ಕಟ್ಟಿಹಾಕಿವೆ' ಎಂದು ಅಸಮಾಧಾನ ಹೊರಹಾಕಿದರು.
ಈ ಹಿಂದೆ ಅನ್ಯ ಭಾಷೆಗಳ ಸಿನಿಮಾಗಳಿಗೆ ಇಂತಿಷ್ಟೇ ಚಿತ್ರಮಂದಿರವನ್ನು ಮಾತ್ರವೇ ನೀಡಬೇಕು ಎಂಬ ನಿಯಮ ಮಾಡಿಕೊಂಡಿದ್ದೆವು. ಆಗ 'ರಾ ಒನ್' ಎಂಬ ಸಿನಿಮಾ ಬಿಡುಗಡೆ ಆಯ್ತು. ಅವರಿಗೆ ನಿಯಮದಂತೆ ಕೆಲವು ಸಿನಿಮಾ ಮಂದಿರಗಳನ್ನು ನೀಡಿದೆವು, ಅವರು ನಮ್ಮ ವಿರುದ್ಧ ನ್ಯಾಯಾಲಯಕ್ಕೆ ಹೋಗಿ ಗೆದ್ದರು. ಅಂದಿನಿಂದ ಯಾವ ಭಾಷೆಯ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ಬೇಕಾದರೂ ಬಿಡುಗಡೆ ಆಗಬಹುದು ಎಂಬಂತಾಗಿದೆ ಎಂದರು ಸಾ.ರಾ.ಗೋವಿಂದು. ಬಾಹುಬಲಿ ಸಿನಿಮಾವನ್ನು ರಾಜ್ಯದಲ್ಲಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರು.
ಎದೆಗೆ ಗುಂಡು ಹೊಡೆದ ಅನುಭವವಾಯಿತು. ಆದರೆ ನ್ಯಾಯಾಲಯದ ಆದೇಶಗಳು ನಮ್ಮನ್ನು ಕಟ್ಟಿಹಾಕಿವೆ. ನಿಮ್ಮಂಥಹವರು ಆದರೂ ಇದರ ಬಗ್ಗೆ ಪ್ರತಿಭಟಿಸುತ್ತಿದ್ದೀರ, ನಿಮಗೆ ನನ್ನ ಗೌರವ ಇದ್ದೇ ಇರುತ್ತದೆ ಎಂದರು ಸಾ.ರಾ.ಗೋವಿಂದು.
'ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕರ್ನಾಕಟದಲ್ಲಿ ಕನ್ನಡದಲ್ಲಿ, ಆಂಧ್ರ, ತೆಲಂಗಾಣಗಳಲ್ಲಿ ತೆಲುಗಿನಲ್ಲಿ, ಕೇರಳದಲ್ಲಿ ಮಲಯಾಳಂ ನಲ್ಲಿ ಬಿಡುಗಡೆ ಆಗಿದೆ. ಇದಕ್ಕೇನು ಅರ್ಥವಿಲ್ಲವೇ, ಭಾಷೆಯ ಬಗ್ಗೆ ಗೌರವ ಬೇಡವೇ, ನಮ್ಮ ಭಾಷೆ ಏನಾಯ್ತು, ಈ ನ್ಯಾಯಾಲಯಗಳಿಗೆ ಇದೆಲ್ಲಾ ಯಾಕೆ ಅರ್ಥವಾಗುತ್ತಿಲ್ಲ' ಎಂದು ಸಾ.ರಾ.ಗೋವಿಂದು ಅಸಮಾಧಾನ ಹೊರಹಾಕಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am