ಬ್ರೇಕಿಂಗ್ ನ್ಯೂಸ್
02-02-21 01:52 pm Source: FILMIBEAT Manjunatha C ಸಿನಿಮಾ
ಡಬ್ಬಿಂಗ್ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥ, ನಿರ್ಮಾಪಕ ಸಾ.ರಾ.ಗೋವಿಂದು. ಡಬ್ಬಿಂಗ್ ಹಾವಳಿ ವಿರುದ್ಧ ಅಸಮಾಧಾನಗೊಂಡ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಇಂದು ಫಿಲಂ ಛೇಂಬರ್ಗೆ ಭೇಟಿ ನೀಡಿ ಸಾ.ರಾ.ಗೋವಿಂದು ಅವರೊಂದಿಗೆ ಚರ್ಚೆ ನಡೆದು, ಅವರಿಗೆ ಮನವಿ ಅರ್ಜಿಯೊಂದನ್ನು ನೀಡಿದರು.
ಈ ಸಂದರ್ಭದಲ್ಲಿ ಡಬ್ಬಿಂಗ್ ವಿರುದ್ಧ ತಾವು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಡಿರುವ ಹೋರಾಟದ ಬಗ್ಗೆ ಮಾತನಾಡಿದ ಸಾ.ರಾ.ಗೋವಿಂದು, 'ನ್ಯಾಯಾಲಯದ ಆದೇಶಗಳು ನಮ್ಮ ಕೈ ಕಟ್ಟಿಹಾಕಿವೆ' ಎಂದು ಅಸಮಾಧಾನ ಹೊರಹಾಕಿದರು.
ಈ ಹಿಂದೆ ಅನ್ಯ ಭಾಷೆಗಳ ಸಿನಿಮಾಗಳಿಗೆ ಇಂತಿಷ್ಟೇ ಚಿತ್ರಮಂದಿರವನ್ನು ಮಾತ್ರವೇ ನೀಡಬೇಕು ಎಂಬ ನಿಯಮ ಮಾಡಿಕೊಂಡಿದ್ದೆವು. ಆಗ 'ರಾ ಒನ್' ಎಂಬ ಸಿನಿಮಾ ಬಿಡುಗಡೆ ಆಯ್ತು. ಅವರಿಗೆ ನಿಯಮದಂತೆ ಕೆಲವು ಸಿನಿಮಾ ಮಂದಿರಗಳನ್ನು ನೀಡಿದೆವು, ಅವರು ನಮ್ಮ ವಿರುದ್ಧ ನ್ಯಾಯಾಲಯಕ್ಕೆ ಹೋಗಿ ಗೆದ್ದರು. ಅಂದಿನಿಂದ ಯಾವ ಭಾಷೆಯ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ಬೇಕಾದರೂ ಬಿಡುಗಡೆ ಆಗಬಹುದು ಎಂಬಂತಾಗಿದೆ ಎಂದರು ಸಾ.ರಾ.ಗೋವಿಂದು. ಬಾಹುಬಲಿ ಸಿನಿಮಾವನ್ನು ರಾಜ್ಯದಲ್ಲಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರು.
ಎದೆಗೆ ಗುಂಡು ಹೊಡೆದ ಅನುಭವವಾಯಿತು. ಆದರೆ ನ್ಯಾಯಾಲಯದ ಆದೇಶಗಳು ನಮ್ಮನ್ನು ಕಟ್ಟಿಹಾಕಿವೆ. ನಿಮ್ಮಂಥಹವರು ಆದರೂ ಇದರ ಬಗ್ಗೆ ಪ್ರತಿಭಟಿಸುತ್ತಿದ್ದೀರ, ನಿಮಗೆ ನನ್ನ ಗೌರವ ಇದ್ದೇ ಇರುತ್ತದೆ ಎಂದರು ಸಾ.ರಾ.ಗೋವಿಂದು.
'ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕರ್ನಾಕಟದಲ್ಲಿ ಕನ್ನಡದಲ್ಲಿ, ಆಂಧ್ರ, ತೆಲಂಗಾಣಗಳಲ್ಲಿ ತೆಲುಗಿನಲ್ಲಿ, ಕೇರಳದಲ್ಲಿ ಮಲಯಾಳಂ ನಲ್ಲಿ ಬಿಡುಗಡೆ ಆಗಿದೆ. ಇದಕ್ಕೇನು ಅರ್ಥವಿಲ್ಲವೇ, ಭಾಷೆಯ ಬಗ್ಗೆ ಗೌರವ ಬೇಡವೇ, ನಮ್ಮ ಭಾಷೆ ಏನಾಯ್ತು, ಈ ನ್ಯಾಯಾಲಯಗಳಿಗೆ ಇದೆಲ್ಲಾ ಯಾಕೆ ಅರ್ಥವಾಗುತ್ತಿಲ್ಲ' ಎಂದು ಸಾ.ರಾ.ಗೋವಿಂದು ಅಸಮಾಧಾನ ಹೊರಹಾಕಿದ್ದಾರೆ.
This News Article is a Copy of FILMIBEAT
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm