ಬ್ರೇಕಿಂಗ್ ನ್ಯೂಸ್
02-02-21 01:52 pm Source: FILMIBEAT Manjunatha C ಸಿನಿಮಾ
ಡಬ್ಬಿಂಗ್ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥ, ನಿರ್ಮಾಪಕ ಸಾ.ರಾ.ಗೋವಿಂದು. ಡಬ್ಬಿಂಗ್ ಹಾವಳಿ ವಿರುದ್ಧ ಅಸಮಾಧಾನಗೊಂಡ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಇಂದು ಫಿಲಂ ಛೇಂಬರ್ಗೆ ಭೇಟಿ ನೀಡಿ ಸಾ.ರಾ.ಗೋವಿಂದು ಅವರೊಂದಿಗೆ ಚರ್ಚೆ ನಡೆದು, ಅವರಿಗೆ ಮನವಿ ಅರ್ಜಿಯೊಂದನ್ನು ನೀಡಿದರು.
ಈ ಸಂದರ್ಭದಲ್ಲಿ ಡಬ್ಬಿಂಗ್ ವಿರುದ್ಧ ತಾವು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಡಿರುವ ಹೋರಾಟದ ಬಗ್ಗೆ ಮಾತನಾಡಿದ ಸಾ.ರಾ.ಗೋವಿಂದು, 'ನ್ಯಾಯಾಲಯದ ಆದೇಶಗಳು ನಮ್ಮ ಕೈ ಕಟ್ಟಿಹಾಕಿವೆ' ಎಂದು ಅಸಮಾಧಾನ ಹೊರಹಾಕಿದರು.
ಈ ಹಿಂದೆ ಅನ್ಯ ಭಾಷೆಗಳ ಸಿನಿಮಾಗಳಿಗೆ ಇಂತಿಷ್ಟೇ ಚಿತ್ರಮಂದಿರವನ್ನು ಮಾತ್ರವೇ ನೀಡಬೇಕು ಎಂಬ ನಿಯಮ ಮಾಡಿಕೊಂಡಿದ್ದೆವು. ಆಗ 'ರಾ ಒನ್' ಎಂಬ ಸಿನಿಮಾ ಬಿಡುಗಡೆ ಆಯ್ತು. ಅವರಿಗೆ ನಿಯಮದಂತೆ ಕೆಲವು ಸಿನಿಮಾ ಮಂದಿರಗಳನ್ನು ನೀಡಿದೆವು, ಅವರು ನಮ್ಮ ವಿರುದ್ಧ ನ್ಯಾಯಾಲಯಕ್ಕೆ ಹೋಗಿ ಗೆದ್ದರು. ಅಂದಿನಿಂದ ಯಾವ ಭಾಷೆಯ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ಬೇಕಾದರೂ ಬಿಡುಗಡೆ ಆಗಬಹುದು ಎಂಬಂತಾಗಿದೆ ಎಂದರು ಸಾ.ರಾ.ಗೋವಿಂದು. ಬಾಹುಬಲಿ ಸಿನಿಮಾವನ್ನು ರಾಜ್ಯದಲ್ಲಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರು.
ಎದೆಗೆ ಗುಂಡು ಹೊಡೆದ ಅನುಭವವಾಯಿತು. ಆದರೆ ನ್ಯಾಯಾಲಯದ ಆದೇಶಗಳು ನಮ್ಮನ್ನು ಕಟ್ಟಿಹಾಕಿವೆ. ನಿಮ್ಮಂಥಹವರು ಆದರೂ ಇದರ ಬಗ್ಗೆ ಪ್ರತಿಭಟಿಸುತ್ತಿದ್ದೀರ, ನಿಮಗೆ ನನ್ನ ಗೌರವ ಇದ್ದೇ ಇರುತ್ತದೆ ಎಂದರು ಸಾ.ರಾ.ಗೋವಿಂದು.
'ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕರ್ನಾಕಟದಲ್ಲಿ ಕನ್ನಡದಲ್ಲಿ, ಆಂಧ್ರ, ತೆಲಂಗಾಣಗಳಲ್ಲಿ ತೆಲುಗಿನಲ್ಲಿ, ಕೇರಳದಲ್ಲಿ ಮಲಯಾಳಂ ನಲ್ಲಿ ಬಿಡುಗಡೆ ಆಗಿದೆ. ಇದಕ್ಕೇನು ಅರ್ಥವಿಲ್ಲವೇ, ಭಾಷೆಯ ಬಗ್ಗೆ ಗೌರವ ಬೇಡವೇ, ನಮ್ಮ ಭಾಷೆ ಏನಾಯ್ತು, ಈ ನ್ಯಾಯಾಲಯಗಳಿಗೆ ಇದೆಲ್ಲಾ ಯಾಕೆ ಅರ್ಥವಾಗುತ್ತಿಲ್ಲ' ಎಂದು ಸಾ.ರಾ.ಗೋವಿಂದು ಅಸಮಾಧಾನ ಹೊರಹಾಕಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm