ಬ್ರೇಕಿಂಗ್ ನ್ಯೂಸ್
02-02-21 02:24 pm Source: FILMIBEAT Shruthi Gk ಸಿನಿಮಾ
ಕಥೆ ಕದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಖ್ಯಾತ ನಿರ್ದೇಶಕ ಶಂಕರ್ ವಿರುದ್ಧ ಚೆನ್ನೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಶಂಕರ್ ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಐಶ್ವರ್ಯ ರೈ ನಟನೆಯ ಎಂದಿರನ್ ಸಿನಿಮಾದ ಕಥೆ ಕಳ್ಳತನದ ಪ್ರಕರಣದಲ್ಲಿ ಶಂಕರ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯಕ್ಕೆ ಹಾಜರಾಗದೆ ಇರುವ ಕಾರಣ ಶಂಕರ್ ವಿರುದ್ಧ ವಾರೆಂಟ್ ಜಾರಿಯಾಗಿದೆ ಎನ್ನುವ ಸುದ್ದಿ ವೈರಲ್ ಆಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಶಂಕರ್, 'ಈ ಸುದ್ದಿ ನೋಡಿ ಆಘಾತವಾಗಿದೆ. ನಮ್ಮ ವಕೀಲರು ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಜಾಮೀನು ರಹಿತ ವಾರೆಂಟ್ ಬಂದಿಲ್ಲ. ಇದು ವದಂತಿ ಅಷ್ಟೆ. ಆನ್ ಲೈನ್ ನ್ಯಾಯಾಲಯದ ವರದಿಯ ದೋಷದಿಂದ ಹಾಗಾಗಿರಬಹುದು. ಈಗ ಸರಿಪಡಿಸಲಾಗಿದೆ. ಯಾವುದೇ ಪರಿಶೀಲನೆ ಮಾಡದೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದು ಬೇಸರ ತಂದಿದೆ. ಇದು ನಮ್ಮ ಕುಟುಂಬ ಮತ್ತು ಹಿತೈಶಿಗಳಿಗೂ ನೋವುಂಟು ಮಾಡಿದೆ' ಎಂದು ಹೇಳಿದ್ದಾರೆ. ಎಂದಿರನ್ ಸಿನಿಮಾ 2010ರಲ್ಲಿ ತೆರೆಗೆ ಬಂದಿದೆ.
ಈ ಸಿನಿಮಾ ರಿಲೀಸ್ ಆದ ಸಮಯದಲ್ಲಿ ಶಾರ್ಟ್ ಸ್ಟೋರಿ ಬರಹಗಾರ ತಮಿಳುನಾಡನ್ ಮದ್ರಾಸ್ ಹೈಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದರು. ಶಂಕರ್, ತನ್ನ ಕಥೆ 'ಜಿಗುಬಾ' ಎನ್ನುವ ಕಥೆಯನ್ನು ಕದ್ದಿರುವುದಾಗಿ ಆರೋಪಿಸಿದ್ದರು. ಈ ಕಥೆ ತಮಿಳು ನಿಯತಕಾಲಿಕೆ ಪ್ರಕರಟವಾಗಿದ್ದಲ್ಲದೆ, ಕಾದಂಬರಿಯಾಗಿಯೂ ಪ್ರಕಟಿಸಲಾಗಿದೆ ಎಂದು ತಮಿಳುನಾಡನ್ ಉಲ್ಲೇಖಿಸಿದ್ದಾರೆ
ತನ್ನ ಕಥೆಯನ್ನು ಕದ್ದು ಸಿನಿಮಾ ಮಾಡಿದ್ದೆ. ಸಿನಿಮಾ ಕೋಟಿ ಕೋಟಿ ಗಳಿಸಿದೆ. ಆದರೆ ಇದು ನನ್ನ ಆಲೋಚನೆ ಎಂದು ದೂರಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ಪ್ರಾರಂಭವಾದರೂ, ಶಂಕರ್ ಅಥವಾ ಅವರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ ಎನ್ನುವ ಸುದ್ದಿ ಹರಿದಾಡಿತ್ತು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm