ಬ್ರೇಕಿಂಗ್ ನ್ಯೂಸ್
03-02-21 04:42 pm Source: FILMIBEAT ಸಿನಿಮಾ
'ಮನರಂಜನೆ ಬಹಳ ಮುಖ್ಯ, ಆದರೆ ಮನರಂಜನೆಗಿಂತ ಜನರ ಆರೋಗ್ಯ, ಕ್ಷೇಮ ಮುಖ್ಯ, ಹಾಗಾಗಿ, ಚಿತ್ರಮಂದಿರಗಳಿಗೆ ಸದ್ಯಕ್ಕೆ ನೂರರಷ್ಟು ಅವಕಾಶ ಕೊಡುವುದು ಸೂಕ್ತವಲ್ಲ'' ಎಂದು ಆರೋಗ್ಯ ಸಚಿವ ಡಾ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
ಫೆಬ್ರವರಿ 1 ರಿಂದ ದೇಶಾದ್ಯಂತ ಚಿತ್ರಮಂದಿರಗಳಲ್ಲಿ 100 ಪರ್ಸೆಂಟ್ ಆಸನ ಭರ್ತಿಯೊಂದಿಗೆ ಪ್ರದರ್ಶನ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಕರ್ನಾಟಕದ ಸರ್ಕಾರ ಈ ಆದೇಶಕ್ಕೆ ತಡೆ ನೀಡಿದ್ದು, ಈ ತಿಂಗಳ ಅಂತ್ಯದವರೆಗೂ ಯಥಾಸ್ಥಿತಿಯಲ್ಲಿ ಚಿತ್ರಮಂದಿರಗಳು ಕಾರ್ಯನಿರ್ವಹಿಸಲಿ ಎಂದು ತಿಳಿಸಿದೆ. ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ಸ್ಯಾಂಡಲ್ವುಡ್ ಸ್ಟಾರ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಧ್ರುವ ಸರ್ಜಾ, ದುನಿಯಾ ವಿಜಯ್, ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಶಿವಣ್ಣ ಸೇರಿದಂತೆ ಹಲವರು ''ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅನುಮತಿ ಕೊಡಿ'' ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಕುರಿತು ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಕೀಯ ಸಭೆಯೂ ಸರಿ ಅಂತ ನಾನು ಹೇಳಲ್ಲ
ರಾಜಕೀಯ ಸಭೆ ನಡೆಯುತ್ತೆ, ಮಾರ್ಕೆಟ್ನಲ್ಲಿ ಜನ ಸೇರ್ತಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್ ''ರಾಜಕಾರಣದ ಸಭೆ ಸರಿ ಅಂತ ನಾವು ಹೇಳಿಲ್ಲ. ಅದೂ ಸರಿ ಅಂತನೂ ಹೇಳಲ್ಲ. ಆದ್ರೆ ಅದು ಹೊರಗಡೆ ಮಾಡ್ತಿದ್ದಾರೆ, ಹೊರಗಡೆ ಆದರೂ ಅದು ಸರಿಯಲ್ಲ. ಸಾಧ್ಯವಾದ ಕಡೆ ಸೋಂಕು ನಿಯಂತ್ರಣ ಮಾಡೋದು ನಮ್ಮ ಸರ್ಕಾರದ ಜವಾಬ್ದಾರಿ'' ಎಂದು ಸ್ಪಷ್ಟನೆ ನೀಡಿದ್ದಾರೆ.
ಫೆಬ್ರವರಿ 28ವರೆಗು ಶೇ 50ರಷ್ಟು ಮುಂದುವರಿಯಲಿದೆ
''ಕೇಂದ್ರ ಸರ್ಕಾರ ಚಿತ್ರಮಂದಿರಗಳಲ್ಲಿ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಸೂಚಿಸಿದೆ. ಹೆಚ್ಚಿನ ಅವಕಾಶ ನೀಡಲು ಆಯಾ ರಾಜ್ಯ ಸರ್ಕಾರ ಕ್ರಮಕೈಗೊಳ್ಳಲು ಸೂಚಿಸಿದೆ. ನಮ್ಮ ತಾಂತ್ರಿಕ ಸಲಹಾ ಸಮಿತಿ ಸಲಹೆ ಪ್ರಕಾರ ಫೆಬ್ರವರಿ 28ವರೆಗು ಶೇ 50ರಷ್ಟು ಮುಂದುವರಿಯಲಿ ಎಂದು ಹೇಳಿದ್ದೇವೆ. ನೆರೆಯ ಕೇರಳದಲ್ಲಿ ಪ್ರತೀ ದಿನ 5 ಸಾವಿರ ಕೇಸ್ ದಾಖಲಾಗುತ್ತಿದೆ. ಮನರಂಜನೆ ಬಹಳ ಮುಖ್ಯ, ಮನರಂಜನೆಗಿಂತ ಮುಖ್ಯ ಜನರ ಆರೋಗ್ಯ, ಕ್ಷೇಮ'' ಎಂದು ಸುಧಾಕರ್ ಹೇಳಿದರು.
ಮತ್ತೊಮ್ಮೆ ಸಭೆ ಮಾಡ್ತೇನೆ
''ನಾನು ಮಂತ್ರಿಯಾಗಿ ಏಕಾಏಕಿ ನಿರ್ಧಾರ ಸಾಧ್ಯವಾಗಲ್ಲ. ಮತ್ತೊಮ್ಮೆ ಸಿಎಂ ಮತ್ತು ತಾಂತ್ರಿಕ ಸಲಹ ಸಮಿತಿ ಜೊತೆ ಸಭೆ ಮಾಡುತ್ತೇನೆ. ಅವರ ಸಲಹೆ ಮೇರೆಗೆ ಅಂತಿಮ ನಿರ್ಧಾರ ಮಾಡುತ್ತೇನೆ'' ಎಂದು ಕೊನೆಯಲ್ಲಿ ಭರವಸೆ ನೀಡಿದರು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm