ಬ್ರೇಕಿಂಗ್ ನ್ಯೂಸ್
03-02-21 04:56 pm Source: FILMIBEAT Manjunatha C ಸಿನಿಮಾ
ನಟ ಪ್ರಭಾಸ್ ನಟಿಸುತ್ತಿರುವ ಎರಡು ಸಿನಿಮಾಗಳ ಸೆಟ್ಗಳಲ್ಲಿ ಒಂದೇ ದಿನ ಅವಘಡ ಸಂಭವಿಸಿದೆ. ನಟ ಪ್ರಭಾಸ್ ನಟಿಸುತ್ತಿರುವ ಭಾರಿ ಬಜೆಟ್ ಸಿನಿಮಾ 'ಆದಿಪುರುಷ್' ನ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.
ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲವಾದರೂ ಬೆಂಕಿಯಿಂದ ಭಾರಿ ನಷ್ಟವೇ ಉಂಟಾಯಿತು. ಮತ್ತೊಂದೆಡೆ ಪ್ರಭಾಸ್ ನಟಿಸಿ, ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ 'ಸಲಾರ್' ಸಿನಿಮಾದ ಸೆಟ್ನ ಬಳಿಯೂ ಅಪಘಾತವೊಂದು ಸಂಭವಿಸಿದೆ.
'ಸಲಾರ್' ಚಿತ್ರೀಕರಣವು ಗೋಧಾವತಿಕನಿ ಎಂಬಲ್ಲಿ ನಡೆಯುತ್ತಿದ್ದು, ಚಿತ್ರೀಕರಣ ಮುಗಿಸಿದ ಚಿತ್ರತಂಡದ ಕೆಲವರು ಹೋಟೆಲ್ಗೆ ವಾಪಸ್ ಬರುವಾಗ ಚಿತ್ರತಂಡವನ್ನು ಹೊತ್ತು ಬರುತ್ತಿದ್ದ ವಾಹನವು ಲಾರಿಯೊಂದಕ್ಕೆ ಗುದ್ದಿದೆ.
ಚಿತ್ರತಂಡದ ಸದಸ್ಯರಿಗೆ ಗಾಯಕಗಳಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಮಮತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಬೇಗನೇ ಹುಷಾರಾಗಿ ಎಂದು ಪ್ರಭಾಸ್ ಹಾಗೂ ಶ್ರುತಿ ಹಾಸನ್ ಸಂದೇಶ ಕಳಿಸಿದ್ದಾರೆ ಎನ್ನಲಾಗಿದೆ.
ಗೋಧಾವರಿ ಗಣಿಯಲ್ಲಿ ಕೆಲವು ದಿನಗಳಿಂದಲೂ ಸಲಾರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಪ್ರಭಾಸ್ ಹಾಗೂ ಶ್ರುತಿ ಹಾಸನ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಿನ್ನೆಯೇ (ಜನವರಿ 02) ರಂದು ನಟ ಪ್ರಭಾಸ್ ನಟಿಸುತ್ತಿರುವ 'ಆದಿಪುರುಷ್' ಸಿನಿಮಾ ಸೆಟ್ನಲ್ಲೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮುಂಬೈನ ಗೊರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್ ನ ಹಿಂಭಾಗದ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿತ್ತು. ಸೆಟ್ನಲ್ಲಿ 60-70 ಜನರಿದ್ದರು. ಸಂಜೆ 4:15 ಕ್ಕೆ ಬೆಂಕಿ ಅವಘಡ ಸಂಭವಿಸಿತು. ಆದರೆ ಅಲ್ಲಿ ಯಾರಿಗೂ ಗಾಯ ಅಥವಾ ಪ್ರಾಣ ಹಾನಿ ಆಗಲಿಲ್ಲ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm