ಬ್ರೇಕಿಂಗ್ ನ್ಯೂಸ್
04-02-21 02:27 pm Source: FILMIBEAT ಸಿನಿಮಾ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ಕುರಿತು ವರದಿ ನೀಡುವಂತೆ ಸಿಬಿಐಗೆ ನಿರ್ದೇಶನ ಮಾಡಬೇಕು ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ವಕೀಲ ಪುನೀತ್ ಕೌರ್ ಥಂಡಾ ಎಂಬುವವರು ಸುಪ್ರೀಂಕೋರ್ಟ್ಗೆ ಪಿಐಎಲ್ ಅರ್ಜಿ ಸಲ್ಲಿಸಿದ್ದರು. ''ಸುಶಾಂತ್ ಸಾವಿನ ಪ್ರಕರಣದ ತನಿಖೆ ಆರಂಭಿಸಿ ಸುಮಾರು ಐದು ತಿಂಗಳು ಕಳೆದುಹೋಗಿದೆ. ಈ ಪ್ರಕರಣದಲ್ಲಿ ಸಿಬಿಐ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇನ್ನೆರಡು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಮತ್ತು ಅಂತಿಮ ವರದಿಯನ್ನು ಸಂಬಂಧಪಟ್ಟ ನ್ಯಾಯಾಲಯದಲ್ಲಿ ಸಲ್ಲಿಸುವಂತೆ'' ಮನವಿ ಮಾಡಿಕೊಂಡಿದ್ದರು.
ಬುಧವಾರ ಈ ಅರ್ಜಿ ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯ ಇಂತಹ ಅರ್ಜಿಗಳನ್ನು ನಾವು ಪ್ರೋತ್ಸಾಹಿಸುವುದಿಲ್ಲ, ನೀವು ಬೇಕಾದರೆ ಹೈಕೋರ್ಟ್ಗೆ ಹೋಗಿ ಎಂದು ತಿರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ತ್ರಿದಸ್ಯ ಪೀಠ, "ನಾವು ಈ ಅರ್ಜಿಯನ್ನು ಪ್ರೋತ್ಸಾಹಿಸಲು ಹೋಗುವುದಿಲ್ಲ, ನೀವು ಹೈಕೋರ್ಟ್ಗೆ ಹೋಗಿ" ಎಂದು ಮನವಿಯನ್ನು ವಜಾಗೊಳಿಸಿದೆ. ಅಂದ್ಹಾಗೆ, ಆಗಸ್ಟ್ 2020 ರಲ್ಲಿ ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐ ವಿಚಾರಣೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಅದಕ್ಕೂ ಮೊದಲು ಈ ಪ್ರಕರಣವನ್ನು ಮುಂಬೈ ಪೊಲೀಸರು ತನಿಖೆ ನಡೆಸಿದರು.
ಒಂದು ಹಂತದಲ್ಲಿ ಸಿಬಿಐ ಸಂಸ್ಥೆ ಈ ಪ್ರಕರಣದಲ್ಲಿ ತನಿಖೆ ಪೂರ್ಣಗೊಳಿಸಿದೆ. ಸದ್ಯದಲ್ಲೇ ನ್ಯಾಯಾಲಯಕ್ಕೆ ಈ ವರದಿ ಸಲ್ಲಿಸಿದೆ ಎಂದು ಹೇಳಲಾಯಿತು. ಆದರೆ, ಇದುವರೆಗೂ ಸಿಬಿಐ ಈ ಕುರಿತು ಸ್ಪಷ್ಟನೆ ನೀಡಿಲ್ಲ. ಜುಲೈ 14, 2020ರಂದು ನಟ ಸುಶಾಂತ್ ಮುಂಬೈನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm