ಬ್ರೇಕಿಂಗ್ ನ್ಯೂಸ್
            
                        04-02-21 02:27 pm Source: FILMIBEAT ಸಿನಿಮಾ
            ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ಕುರಿತು ವರದಿ ನೀಡುವಂತೆ ಸಿಬಿಐಗೆ ನಿರ್ದೇಶನ ಮಾಡಬೇಕು ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ವಕೀಲ ಪುನೀತ್ ಕೌರ್ ಥಂಡಾ ಎಂಬುವವರು ಸುಪ್ರೀಂಕೋರ್ಟ್ಗೆ ಪಿಐಎಲ್ ಅರ್ಜಿ ಸಲ್ಲಿಸಿದ್ದರು. ''ಸುಶಾಂತ್ ಸಾವಿನ ಪ್ರಕರಣದ ತನಿಖೆ ಆರಂಭಿಸಿ ಸುಮಾರು ಐದು ತಿಂಗಳು ಕಳೆದುಹೋಗಿದೆ. ಈ ಪ್ರಕರಣದಲ್ಲಿ ಸಿಬಿಐ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇನ್ನೆರಡು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಮತ್ತು ಅಂತಿಮ ವರದಿಯನ್ನು ಸಂಬಂಧಪಟ್ಟ ನ್ಯಾಯಾಲಯದಲ್ಲಿ ಸಲ್ಲಿಸುವಂತೆ'' ಮನವಿ ಮಾಡಿಕೊಂಡಿದ್ದರು.
ಬುಧವಾರ ಈ ಅರ್ಜಿ ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯ ಇಂತಹ ಅರ್ಜಿಗಳನ್ನು ನಾವು ಪ್ರೋತ್ಸಾಹಿಸುವುದಿಲ್ಲ, ನೀವು ಬೇಕಾದರೆ ಹೈಕೋರ್ಟ್ಗೆ ಹೋಗಿ ಎಂದು ತಿರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ತ್ರಿದಸ್ಯ ಪೀಠ, "ನಾವು ಈ ಅರ್ಜಿಯನ್ನು ಪ್ರೋತ್ಸಾಹಿಸಲು ಹೋಗುವುದಿಲ್ಲ, ನೀವು ಹೈಕೋರ್ಟ್ಗೆ ಹೋಗಿ" ಎಂದು ಮನವಿಯನ್ನು ವಜಾಗೊಳಿಸಿದೆ. ಅಂದ್ಹಾಗೆ, ಆಗಸ್ಟ್ 2020 ರಲ್ಲಿ ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐ ವಿಚಾರಣೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಅದಕ್ಕೂ ಮೊದಲು ಈ ಪ್ರಕರಣವನ್ನು ಮುಂಬೈ ಪೊಲೀಸರು ತನಿಖೆ ನಡೆಸಿದರು.
ಒಂದು ಹಂತದಲ್ಲಿ ಸಿಬಿಐ ಸಂಸ್ಥೆ ಈ ಪ್ರಕರಣದಲ್ಲಿ ತನಿಖೆ ಪೂರ್ಣಗೊಳಿಸಿದೆ. ಸದ್ಯದಲ್ಲೇ ನ್ಯಾಯಾಲಯಕ್ಕೆ ಈ ವರದಿ ಸಲ್ಲಿಸಿದೆ ಎಂದು ಹೇಳಲಾಯಿತು. ಆದರೆ, ಇದುವರೆಗೂ ಸಿಬಿಐ ಈ ಕುರಿತು ಸ್ಪಷ್ಟನೆ ನೀಡಿಲ್ಲ. ಜುಲೈ 14, 2020ರಂದು ನಟ ಸುಶಾಂತ್ ಮುಂಬೈನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
This News Article is a Copy of FILMIBEAT
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm