ಬ್ರೇಕಿಂಗ್ ನ್ಯೂಸ್
05-02-21 01:40 pm Source: FILMIBEAT Bharath Kumar K ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ 'ರಾಬರ್ಟ್' ಚಿತ್ರದ ತೆಲುಗು ಬಿಡುಗಡೆಯ ಹಾದಿ ಸುಗಮವಾಗಿದೆ. ಏಕಕಾಲದಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ರಾಬರ್ಟ್ ರಿಲೀಸ್ ಮಾಡಲು ಕಷ್ಟ ಎಂದು ಹೇಳಿದ್ದ ವಿತರಕರು ಈಗ ದಾಸನ ಚಿತ್ರಕ್ಕೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡ್ತಿದ್ದಾರೆ. ನಿಗದಿಯಾಗಿರುವಂತೆ ಮಾರ್ಚ್ 11 ರಂದೇ ಕನ್ನಡ ಮತ್ತು ತೆಲುಗಿನಲ್ಲಿ ರಾಬರ್ಟ್ ತೆರೆಕಾಣುತ್ತಿದೆ. ನೆರೆರಾಜ್ಯಗಳಲ್ಲೂ ರಾಬರ್ಟ್ ಕ್ರೇಜ್ ಜೋರಾಗಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಹೆಚ್ಚಿನ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಡಿ ಬಾಸ್ ಸಿನಿಮಾ ಬಿಡುಗಡೆಯಾಗುತ್ತಿದೆ. ತೆಲುಗಿನ ಹಿರಿಯ ನಿರ್ದೇಶಕ-ನಿರ್ಮಾಪಕ ರಾಬರ್ಟ್ ಚಿತ್ರದ ತೆಲುಗು ವರ್ಷನ್ ಸಿನಿಮಾವನ್ನು ವಿತರಣೆ ಮಾಡ್ತಿದ್ದು, ಭಾರಿ ಬೆಲೆ ನೀಡಿ ಹಕ್ಕು ಖರೀದಿಸಿದ್ದಾರೆ ಎನ್ನಲಾಗಿದೆ.
ಚಂಚಲವಾಡ ಶ್ರೀನಿವಾಸ್ ರಾವ್ ವಿತರಣೆ
ರಾಬರ್ಟ್ ಚಿತ್ರವನ್ನು ತೆಲುಗಿನ ಹಿರಿಯ ನಿರ್ದೇಶಕ ಚಂಚಲವಾಡ ಶ್ರೀನಿವಾಸ್ ರಾವ್ ವಿತರಣೆ ಮಾಡುತ್ತಿದ್ದಾರೆ. ಶ್ರೀ ವೆಂಕಟೇಶ್ವರ ಮೂವೀಸ್ ಮೂಲಕ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ದರ್ಶನ್ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

ದುಬಾರಿ ಬೆಲೆಗೆ ರಾಬರ್ಟ್ ಸೇಲ್?
ರಾಬರ್ಟ್ ಚಿತ್ರದ ವಿತರಣೆ ಹಕ್ಕು ದೊಡ್ಡ ಬೆಲೆ ಮಾರಾಟ ಆಗಿದೆ ಎಂಬ ಸುದ್ದಿ ವರದಿಯಾಗಿದೆ. ಆದರೆ, ನಿಖರವಾಗಿ ಎಷ್ಟು ಹಣ ಎಂದು ಬಹಿರಂಗವಾಗಿಲ್ಲ. ದರ್ಶನ್ ಅವರ ಚಿತ್ರಕ್ಕೆ ತೆಲುಗಿನಲ್ಲಿ ಹೆಚ್ಚು ಬೇಡಿಕೆಯಿದ್ದು, ದಾಖಲೆಯ ಹಣ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

400ಕ್ಕೂ ಹೆಚ್ಚು ಥಿಯೇಟರ್?
ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ರಾಬರ್ಟ್ ಚಿತ್ರಕ್ಕೆ 400ಕ್ಕೂ ಹೆಚ್ಚು ಚಿತ್ರಮಂದಿರಗಳನ್ನು ಕಾಯ್ದಿರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡಿ ಬಾಸ್ ಚಿತ್ರಗಳ ಪೈಕಿ ರಾಬರ್ಟ್ ಚಿತ್ರಕ್ಕೆ ಆಂಧ್ರ ಮತ್ತು ತೆಲಂಗಾಣದಲ್ಲಿ ದೊಡ್ಡ ಓಪನಿಂಗ್ ಸಿಗುತ್ತಿದೆ.

ಉಮಾಪತಿಗೆ ಸನ್ಮಾನ ಮಾಡಿದ್ದ ತೆಲುಗು ನಿರ್ಮಾಪಕರು
ರಾಬರ್ಟ್ ಚಿತ್ರಕ್ಕೆ ತೆಲುಗು ವಿತರಕರಿಂದ ಅಡ್ಡಿ ಎಂಬ ವಿವಾದದ ಬಳಿಕ, ಕನ್ನಡ ನಿರ್ಮಾಪಕ ಉಮಾಪತಿ ಅವರನ್ನು ಆಂಧ್ರಕ್ಕೆ ಕರೆಸಿಕೊಂಡಿದ್ದ ತೆಲುಗು ನಿರ್ಮಾಪಕರು ಸನ್ಮಾನ ಮಾಡಿದ್ದರು. ರಾಬರ್ಟ್ ಚಿತ್ರಕ್ಕೆ ಯಾವ ಅಡತಡೆಯೂ ಇರಲ್ಲ. ಸುಗಮವಾಗಿ ಬಿಡುಗಡೆಯಾಗಲಿದೆ ಎಂದು ಆಶ್ವಾಸನೆ ನೀಡಿದ್ದರು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm