ಬ್ರೇಕಿಂಗ್ ನ್ಯೂಸ್
08-02-21 02:47 pm Source: FILMIBEAT Shruthi Gk ಸಿನಿಮಾ
ತಮಿಳಿನ ಖ್ಯಾತ ನಟ ಸೂರ್ಯಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಸೂರ್ಯ ಹೇಳಿದ್ದಾರೆ. ಅಲ್ಲದೆ ಇನ್ನೂ ಕೊರೊನಾ ವೈರಸ್ ಹೋಗಿಲ್ಲ, ಜೀವನ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ ಎಂದಿಲ್ಲ ಎಂದು ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿರುವ ಸೂರ್ಯ, 'ನಾನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದೇನೆ. ವೈದ್ಯರಿಂದ ಚಿಕಿತ್ಸೆಪಡೆಯುತ್ತಿದ್ದೇನೆ. ಜೀವನವೂ ಇನ್ನು ಸಹಜ ಸ್ಥಿತಿಗೆ ಬಂದಿಲ್ಲ ಎಂದು ನಾವು ಅರಿತುಕೊಳ್ಳಬೇಕು. ಸುರಕ್ಷತೆಯ ಕಡೆ ಗಮನಕೊಡಬೇಕು. ವೈದ್ಯರಿಗೆ ನನ್ನ ಧನ್ಯವಾದಗಳು' ಎಂದು ಹೇಳಿದ್ದಾರೆ.
ನಿರ್ದೇಶಕ ರಾಜಶೇಖರ್ ಪಾಂಡಿಯನ್ ಟ್ವೀಟ್ ಮಾಡಿ, ಸಹೋದರ ಮತ್ತು ಸಹೋದರಿಯರೇ ಅಣ್ಣ ಚೆನ್ನಾಗಿದ್ದಾರೆ. ಯಾರು ಚಿಂತಿಸಬೇಡಿ' ಎಂದು ಹೇಳಿದ್ದಾರೆ.
ನಟ ಸೂರ್ಯ ಟ್ವೀಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಬೇಗ ವಾಪಸ್ ಆಗುವಂತೆ ಕೇಳಿಕೊಳ್ಳುತ್ತಿದ್ದಾರೆ. ಸೂರ್ಯ ಕೊನೆಯದಾಗಿ ಸೂರರೈ ಪೊಟ್ರು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ. ಒಟಿಟಿಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ಆಸ್ಕರ್ ರೇಸ್ ನಲ್ಲಿ ಜಾಗ ಪಡೆದಿದೆ.
ಇತ್ತೀಚಿಗಷ್ಟೆ ಸೂರ್ಯ ನಟನೆಯ 40ನೇ ಸಿನಿಮಾ ಅನೌನ್ಸ್ ಆಗಿದ್ದು, ಪಾಂಡಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧರಾಗಿದ್ದ ಸೂರ್ಯಗೆ ಈಗ ಕೊರೊನಾ ಸೋಂಕು ತಗುಲಿರುವುದರಿಂದ ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆ ಇದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm