ಬ್ರೇಕಿಂಗ್ ನ್ಯೂಸ್
08-02-21 02:58 pm Source: FILMIBEAT Bharath Kumar K ಸಿನಿಮಾ
ಕೊನೆಗೂ ಕನ್ನಡ ಬಿಗ್ ಬಾಸ್ ಹೊಸ ಆವೃತ್ತಿ ಅರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಅಧಿಕೃತವಾಗಿ ದಿನಾಂಕ ಪ್ರಕಟವಾಗಿಲ್ಲ. ಅದರೆ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿಯ ಆರಂಭದ ದಿನಾಂಕದ ಬಗ್ಗೆ ಎಕ್ಸ್ಕ್ಲೂಸಿವ್ ಮಾಹಿತಿ ಫಿಲ್ಮಿಬೀಟ್ಗೆ ಲಭ್ಯವಾಗಿದೆ. ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿಯ ಸಿದ್ದತೆ ಕಾರ್ಯಗಳು ಬಹುತೇಕ ಅಂತ್ಯಕ್ಕೆ ಬಂದಿದ್ದು, ಸ್ಪರ್ಧಿಗಳ ಪಟ್ಟಿಯೂ ಅಂತಿಮವಾಗಿದೆ. ಹೊಸ ಸೀಸನ್ಗೆ ಆಯ್ಕೆಯಾದ ಸ್ಪರ್ಧಿಗಳನ್ನು ಕೆಲವು ದಿನ ಕ್ವಾರಂಟೈನ್ ಮಾಡಲಾಗುವುದು, ಬಳಿಕ ಬಿಗ್ ಬಾಸ್ ಮನೆಗೆ ಕಳುಹಿಸಿಕೊಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ.
ಫೆಬ್ರವರಿ 28ಕ್ಕೆ ಬಿಗ್ ಬಾಸ್ ಆರಂಭ?
ಫಿಲ್ಮಿಬೀಟ್ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಫೆಬ್ರವರಿ 28 ರಂದು ಆರಂಭವಾಗಲಿದೆ. ಬಿಗ್ಬಾಸ್ ಹೊಸ ಆವೃತ್ತಿಗೆ ಸಂಬಂಧಿಸಿದಂತೆ ಎಲ್ಲ ತಯಾರಿ ನಡೆದಿದ್ದು, ಈ ತಿಂಗಳ ಕೊನೆಯ ಭಾನುವಾರದಿಂದ ದೊಡ್ಮನೆ ಆಟ ಆರಂಭವಾಗಲಿದೆಯಂತೆ.

ಸ್ಪರ್ಧಿಗಳಿಗೆ ಕ್ವಾರಂಟೈನ್ ಕಡ್ಡಾಯ?
ಪ್ರಸ್ತುತ ಕೊರೊನಾ ವೈರಸ್ ಭೀತಿ ಇರುವ ಕಾರಣ, ಬಿಗ್ಬಾಸ್ ಮನೆಗೆ ಸ್ಪರ್ಧಿಗಳನ್ನು ಕಳುಹಿಸುವ ಮುನ್ನ ಕ್ವಾರಂಟೈನ್ ಮಾಡಲಾಗುತ್ತದೆ. ಬಿಗ್ಬಾಸ್ಗೆ ಹೋಗುವ ಎಲ್ಲ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿದ್ದು, ನಂತರ ಕೊವಿಡ್ ಪರೀಕ್ಷೆ ಮಾಡಿ ಬಿಗ್ ಮನೆಗೆ ಎಂಟ್ರಿ ನೀಡಲಾಗುತ್ತದೆ.
ದುಬೈನಿಂದ ಮರಳಿದ ಸುದೀಪ್
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ ದುಬೈಗೆ ತೆರಳಿದ್ದ ಸುದೀಪ್ ಬೆಂಗಳೂರಿಗೆ ಮರಳಿದ್ದಾರೆ. ಬುರ್ಜ್ ಖಲೀಫಾ ಕಟ್ಟಡದ ಮೇಲೆ ವಿಕ್ರಾಂತ್ ರೋಣ ಟೀಸರ್ ಹಾಗೂ ಸುದೀಪ್ ಅವರ 25 ವರ್ಷದ ಜರ್ನಿ ವಿಡಿಯೋ ಪ್ರದರ್ಶನ ಮಾಡಲಾಗಿತ್ತು. ಈ ಸಂಭ್ರಮ ಮುಗಿಸಿ ಬಂದ ಸುದೀಪ್ ಈಗ ಬಿಗ್ ಬಾಸ್ ಕಡೆ ಗಮನ ಕೊಡಲಿದ್ದಾರೆ. ಈಗಾಗಲೇ ಪ್ರೋಮೋ ಶೂಟ್ ಮಾಡಿದ್ದು, ಟಿವಿಯಲ್ಲಿ ಪ್ರಸಾರ ಸಹ ಆಗ್ತಿದೆ.

ಈ ಸಲ ಯಾರೆಲ್ಲ ಹೋಗ್ತಾರೆ?
ಪ್ರತಿವರ್ಷದಂತೆ ಈ ವರ್ಷವೂ ಬಿಗ್ ಬಾಸ್ ಆರಂಭಕ್ಕೂ ಮುನ್ನವೇ ಅನೇಕರ ಹೆಸರು ಚರ್ಚೆಯಲ್ಲಿದೆ. ಯಶ್ ಅವರ ತಾಯಿ ಪುಷ್ಪ, ಹಿರಿಯ ನಟಿ ವಿನಯಪ್ರಸಾದ್, ಬ್ರಹ್ಮಗಂಟು ಗೀತಾ ಅವರು ಹೆಸರು ಹೆಚ್ಚು ಕುತೂಹಲ ಮೂಡಿಸಿದವು. ಆದರೆ, ಇವರು ಈ ಸುದ್ದಿಯನ್ನು ನಿರಾಕರಿಸಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm